ADVERTISEMENT

ಲಾರಿ ಹಾಯ್ದು ನಾಲ್ಕು ಆಡುಗಳ ಸಾವು

​ಪ್ರಜಾವಾಣಿ ವಾರ್ತೆ
Published 18 ಜನವರಿ 2021, 14:51 IST
Last Updated 18 ಜನವರಿ 2021, 14:51 IST

ಜನವಾಡ: ಬೀದರ್ ತಾಲ್ಲೂಕಿನ ಕಾಡವಾದ ಸಮೀಪ ಸೋಮವಾರ ಬೆಳಿಗ್ಗೆ ಲಾರಿ ಅಡಿ ಸಿಲುಕಿ ನಾಲ್ಕು ಆಡುಗಳು ಮೃತಪಟ್ಟಿವೆ.

ಮನ್ನಾಎಖ್ಖೆಳ್ಳಿ ಕಡೆಯಿಂದ ಬರುತ್ತಿದ್ದ ಲಾರಿ ಹಾಯ್ದು ರಸ್ತೆ ದಾಟುತ್ತಿದ್ದ ಆಡುಗಳು ಸ್ಥಳದಲ್ಲೇ ಮೃತಪಟ್ಟಿವೆ. ಆಡುಗಳು ಕಬ್ಬು ಕಟಾವು ಮಾಡುವ ವಲಸೆ ಕಾರ್ಮಿಕರಿಗೆ ಸೇರಿವೆ. ಅವುಗಳ ಒಟ್ಟು ಮೌಲ್ಯ ₹50 ಸಾವಿರ ಎಂದು ಅಂದಾಜಿಸಲಾಗಿದೆ.

ಘಟನೆ ನಂತರವೂ ನಿಲ್ಲಿಸದೆ ಹೋಗುತ್ತಿದ್ದ ಲಾರಿಯನ್ನು ಗ್ರಾಮದ ಯುವಕರು ಬೆನ್ನಟ್ಟಿ ಹಿಡಿದಿದ್ದಾರೆ. ವೇಗವಾಗಿ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಘಟನೆ ಸಂಭವಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.