ADVERTISEMENT

ಒಂದೇ ಕುಟುಂಬದ ನಾಲ್ವರು ನೀರು ಪಾಲು 

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2022, 17:20 IST
Last Updated 26 ಸೆಪ್ಟೆಂಬರ್ 2022, 17:20 IST
   

ಜನವಾಡ (ಬೀದರ್‌ ಜಿಲ್ಲೆ): ಬೀದರ್ ತಾಲ್ಲೂಕಿನ ಕಂಗಟಿ ಗ್ರಾಮದ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ನೀರು ಪಾಲಾಗಿದ್ದಾರೆ. ಮೂವರ ಶವ ದೊರೆಕಿದ್ದು, ಬಾಲಕನ ಶೋಧ ಕಾರ್ಯ ಮುಂದುವರಿದಿದೆ.

ಕಂಗಟಿ ಗ್ರಾಮದ ಆನಂದಾ ಸಂಜುಕುಮಾರ ಪರೀಟ (30), ಪ್ರಜ್ವಲ್‌ ಸಂಜುಕುಮಾರ ಪರೀಟ (12) ಹಾಗೂ ಸುನೀತಾ ಮಂಜುಕುಮಾರ ಪರೀಟ (25) ಶವಗಳು ದೊರೆಕಿವೆ. ನಾಗಶೆಟ್ಟಿ ಮಂಜುಕುಮಾರ ಪರೀಟ (10) ಅವರಿಗಾಗಿ ಹುಡುಕಾಟ ನಡೆದಿದೆ.

ಆನಂದಾ ಹಾಗೂ ಸುನೀತಾ ಬಟ್ಟೆ ತೊಳೆಯಲು ಹೋದಾಗ ಮಕ್ಕಳು ಈಜಲು ನೀರಿಗೆ ಇಳಿದ ಸಂದರ್ಭದಲ್ಲಿ ಕೆಸರಿನಲ್ಲಿ ಸಿಕ್ಕಿಕೊಂದ್ದರು. ಅವರನ್ನು ಮೇಲಕ್ಕೆತ್ತಲು ಹೋದ ತಾಯಂದಿರೂ ನೀರು ಪಾಲಾಗಿದ್ದಾರೆ. ಜನವಾಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಳುಗು ತಜ್ಞರನ್ನು ಕರೆಸಿ ಶವಗಳ ಶೋಧ ಕಾರ್ಯ ನಡೆಸಿದರು. ಮೂವರ ಶವ ಸಂಜೆ ಪತ್ತೆಯಾಗಿದೆ. ತಡ ರಾತ್ರಿಯ ವರೆಗೂ ಬಾಲಕ ಪತ್ತೆಯಾಗಿಲ್ಲ.

ADVERTISEMENT

ನವರಾತ್ರಿಯ ಸಂದರ್ಭದಲ್ಲಿ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.