ಔರಾದ್ (ಬೀದರ್ ಜಿಲ್ಲೆ): ತಾಲ್ಲೂಕಿನ ಜಂಬಗಿ ಬಳಿಯ ಘಾಮಾ ತಾಂಡಾದ ಗೋಪಾಲ ಎಂಬುವವರ ಮನೆ ಮೇಲೆ ಶನಿವಾರ ತಡರಾತ್ರಿ ದಾಳಿ ಮಾಡಿದ ಪೊಲೀಸರು ಸುಮಾರು 6.5 ಕ್ವಿಂಟಲ್ ಗಾಂಜಾ ವಶಪಡಿಸಿಕೊಂಡಿದ್ದಾರೆ.
‘ಬೇರೆಡೆ ಸಾಗಿಸುವ ಉದ್ದೇಶದಿಂದ ಗಾಂಜಾ ಪ್ಯಾಕೆಟ್ಗಳನ್ನು ಸಂಗ್ರಹಿಸಿ ಇಡಲಾಗಿದ್ದು, ಇದರ ಮೌಲ್ಯ ₹30 ಲಕ್ಷಕ್ಕೂ ಅಧಿಕ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
‘ಗೋಪಾಲ ತಲೆ ಮರೆಸಿಕೊಂಡಿದ್ದು, ಕೃತ್ಯಕ್ಕೆ ಸಹಕರಿಸಿದ್ದಾರೆ ಎನ್ನಲಾದ ಅನಿಲ್ ಮತ್ತು ವಿಜಯ್ ಎಂಬುವವರನ್ನು ಬಂಧಿಸಲಾಗಿದೆ. ಇವರಿಂದ ಒಂದು ಕಾರು, ಮೂರು ಬೈಕ್ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ’ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.