ADVERTISEMENT

₹1 ಲಕ್ಷ ಮೌಲ್ಯದ ಗಾಂಜಾ ಬೆಳೆ ವಶ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2021, 5:55 IST
Last Updated 12 ಏಪ್ರಿಲ್ 2021, 5:55 IST
ಚಿಟಗುಪ್ಪ ತಾಲ್ಲೂಕಿನ ಮಾಡಗೂಳ ಗ್ರಾಮದ ಹೊರವಲಯದ ಸಂತೋಷ ಎಂಬುವರ ಜಮೀನಿನಲ್ಲಿ ಬೆಳೆದ ಗಾಂಜಾ ಬೆಳೆಯನ್ನು ಅಬಕಾರಿ ಪೊಲೀಸರು ಭಾನುವಾರ ಜಪ್ತಿ ಮಾಡಿರುವುದು
ಚಿಟಗುಪ್ಪ ತಾಲ್ಲೂಕಿನ ಮಾಡಗೂಳ ಗ್ರಾಮದ ಹೊರವಲಯದ ಸಂತೋಷ ಎಂಬುವರ ಜಮೀನಿನಲ್ಲಿ ಬೆಳೆದ ಗಾಂಜಾ ಬೆಳೆಯನ್ನು ಅಬಕಾರಿ ಪೊಲೀಸರು ಭಾನುವಾರ ಜಪ್ತಿ ಮಾಡಿರುವುದು   

ಚಿಟಗುಪ್ಪ: ತಾಲ್ಲೂಕಿನ ಮಾಡಗೂಳ ಗ್ರಾಮದ ಹೊರ ವಲಯದಲ್ಲಿ ಗ್ರಾಮದ ಸಂತೋಷಕುಮಾರ ಅಮೃತ ಎಂಬುವರ ಜಮೀನಿನಲ್ಲಿ ಬೆಳೆದ ₹1 ಲಕ್ಷ ಮೌಲ್ಯದ ಗಾಂಜಾ ಬೆಳೆ ವಶಪಡಿಸಿಕೊಳ್ಳಲಾಗಿದೆ.

‘ಖಚಿತ ಮಾಹಿತಿ ಮೇರೆಗೆ ಪೊಲೀಸರು ಶೋಧ ನಡೆಸಿದಾಗ ಕಟಾವು ಮಾಡಲಾದ ಜೋಳದ ಬೆಳೆ ಮಧ್ಯದಲ್ಲಿ ಅಕ್ರಮವಾಗಿ 62 ಗಾಂಜಾ ಸಸಿಗಳು ಸಾಗುವಳಿ ಮಾಡಿರುವುದು ಪತ್ತೆಯಾಗಿದೆ. ಒಟ್ಟು 51 ಕೆ.ಜಿ ತೂಕದ ಗಾಂಜಾ ಗಿಡಗಳು ವಶಕ್ಕೆ ಪಡೆಯಲಾಗಿದೆ’ ಎಂದು ಅಬಕಾರಿ ಪೊಲೀಸರು ತಿಳಿಸಿದ್ದಾರೆ.

ದಾಳಿಯಲ್ಲಿ ಅಬಕಾರಿ ಉಪ ಅಧೀಕ್ಷಕರಾದ ರಾಮ್ ರಾಠೋಡ್, ಇನ್‌ಸ್ಪೆಕ್ಟರ್‌ಗಳಾದ ಮಹೇಶ್ ಧೂಳಪ್ಪನವರ್, ನಿಂಗರೆಡ್ಡಿ, ಪ್ರವೀಣ್ ರಂಗಸುಬ್ಬೆ, ಸಂಜಯ ಅಸ್ಕಿ, ಸಬ್‌ ಇನ್‌ಸ್ಪೆಕ್ಟರ್‌ ದಿಲೀಪ್ ಸಿಂಗ್ ಠಾಕೂರ್, ಸಿಬ್ಬಂದಿ ಶಿವರಾಮ ರೆಡ್ಡಿ, ವೀರಶೆಟ್ಟಿ, ಅನಿಲ್ ಕುಮಾರ, ಟೋನಿ ಸೆಡ್ರಿಕ್, ವಿಠಲ್, ಉಮೇಶ್, ವಿಷ್ಣು, ಅತೀಕ್ ಮತ್ತು ವೆಂಕಟೇಶ್ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.