ಕಮಲನಗರ: ತಾಲ್ಲೂಕಿನ ಮುರ್ಕಿ ಗ್ರಾಮದಲ್ಲಿಭಾನುವಾರ ಜೀಪೊಂದು ಡಿಕ್ಕಿಯಾಗಿ ಬಾಲಕಿ ಮೃತಪಟ್ಟಿದ್ದಾಳೆ.
ಮುರ್ಕಿ ತಾಂಡಾದ ಶಿವಾನಿ ಸಂದೀಪ ರಾಠೋಡ್ (5) ಮೃತ ಬಾಲಕಿ.
ಬಾಲಕಿ ರಸ್ತೆ ಪಕ್ಕದಲ್ಲಿ ಶೌಚಕ್ಕೆ ಹೋಗಿ ಹಿಂತಿರುಗಿ ಬರುವ ವೇಳೆ ಘಟನೆ ನಡೆದಿದೆ. ಸ್ಥಳಕ್ಕೆ ಕಮಲನಗರ ಪೊಲೀಸ್ ಠಾಣೆ ಪಿಎಸ್ ತಾನಾಜಿ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.