ADVERTISEMENT

ಆದ್ಯತೆ ಮೇರೆಗೆ ನರೇಗಾ ಕೆಲಸ ನೀಡಿ: ಜಿಪಂ ಸಿಇಒ

​ಪ್ರಜಾವಾಣಿ ವಾರ್ತೆ
Published 16 ಮೇ 2021, 2:59 IST
Last Updated 16 ಮೇ 2021, 2:59 IST

ಹುಲಸೂರ: ‘ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ನರೇಗಾ ಯೋಜನೆಯಡಿ ಕಾರ್ಮಿಕರಿಗೆ ಆದ್ಯತೆ ಮೇರೆಗೆ ಕೂಲಿ ಕೆಲಸ ನೀಡಬೇಕು’ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಹೀರಾ ನಸೀಂ ಹೇಳಿದರು.

ಸಚಿವ ಪ್ರಭು ಚವಾಣ್‌ ಅವರೊಂದಿಗೆ ಶನಿವಾರ ಪಟ್ಟಣದಲ್ಲಿ ರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತಿಯ ನರೇಗಾ ಸಾಹಯಕ ನಿರ್ದೇಶಕ ಜಯಪ್ರಕಾಶ್ ಚವ್ಹಾಣ ಅವರೊಂದಿಗೆ ಸೂಚಿಸಿದರು.

‘ವೈಯಕ್ತಿಕ ಕಾಮಗಾರಿಗಳಾದ ತೆರೆದಬಾವಿ, ಬದು ನಿರ್ಮಾಣ, ಜಾನುವಾರು ಕೊಟ್ಟಿಗೆ ನಿರ್ಮಿಸುವತ್ತ ಗಮನ ಹರಿಸಬೇಕು. ಆದ್ಯತೆ ಮೇರೆಗೆ ಕೆಲಸ ನೀಡಬೇಕು’ ಎಂದು ಸೂಚಿಸಿದರು.

ADVERTISEMENT

ತಾ.ಪಂ ಇಒ ಖಾಲಿದ್ ಅಲಿ, ಹುಲಸೂರ ಪಿಡಿಒ ಭೀಮಶೆಪ್ಪ ದಂಡಿನ್‌, ತಾಲ್ಲೂಕು ತಾಂತ್ರಿಕ ಸಂಯೋಜಕ ಮಲ್ಲಿಕಾರ್ಜುನ ನಾವದಗಿ ಹಾಗೂ ತಾಲ್ಲೂಕು ಐಇಸಿ ಸಂಯೋಜಕ ಗಣಪತಿ ಹರಕುಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.