ADVERTISEMENT

‘ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ’: ಶಾಸಕ ಈಶ್ವರ ಖಂಡ್ರೆ

₹1 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಖಂಡ್ರೆ ಚಾಲನೆ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2021, 3:23 IST
Last Updated 6 ಅಕ್ಟೋಬರ್ 2021, 3:23 IST
ಭಾಲ್ಕಿ ತಾಲ್ಲೂಕಿನ ಕೋಸಂ-ವಿಲಾಸಪೂರ್ ವರೆಗಿನರಸ್ತೆ ಕಾಮಗಾರಿಗೆ ಶಾಸಕ ಈಶ್ವರ ಖಂಡ್ರೆ ಚಾಲನೆ ನೀಡಿದರು
ಭಾಲ್ಕಿ ತಾಲ್ಲೂಕಿನ ಕೋಸಂ-ವಿಲಾಸಪೂರ್ ವರೆಗಿನರಸ್ತೆ ಕಾಮಗಾರಿಗೆ ಶಾಸಕ ಈಶ್ವರ ಖಂಡ್ರೆ ಚಾಲನೆ ನೀಡಿದರು   

ಭಾಲ್ಕಿ: ತಾಲ್ಲೂಕಿನ ಕೋಸಂ-ವಿಲಾಸ ಪುರ್ ವರೆಗಿನ ರಸ್ತೆ ಕಾಮಗಾರಿಗೆ ಶಾಸಕ ಈಶ್ವರ ಖಂಡ್ರೆ ಚಾಲನೆ ನೀಡಿದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಯೋಜನೆಯಡಿ ಈ ರಸ್ತೆ ನಿರ್ಮಾಣಕ್ಕೆ ₹1 ಕೋಟಿ ಅನುದಾನ ಒದಗಿಸಲಾಗಿದೆ. ಎರಡ್ಮೂರು ತಿಂಗೊಳಗೆ ಗುಣಮಟ್ಟದ ರಸ್ತೆ ನಿರ್ಮಿಸಿ ಜನರ ಓಡಾಟಕ್ಕೆ ಅನುಕೂಲ ಮಾಡಿಕೊಡುವಂತೆ ಗುತ್ತಿಗೆದಾರರಿಗೆ ಶಾಸಕ ಈಶ್ವರ ಖಂಡ್ರೆ ಸೂಚನೆ ನೀಡಿದರು.

ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಕೋಣೆಗಳು ಶಿಥಿಲಾವಸ್ಥೆಗೆ ತಲುಪಿರುವ ಬಗ್ಗೆ ಗ್ರಾಮಸ್ಥರು ಗಮನಕ್ಕೆ ತಂದಿದ್ದಾರೆ. ಸಂಬಂಧಿತರಿಗೆ ಸೂಚಿಸಿ ಬರುವ ದಿನಗಳಲ್ಲಿ ಶಾಲೆಗೆ ಹೊಸದಾಗಿ ಹೆಚ್ಚುವರಿ ಕೋಣೆ ನಿರ್ಮಾಣಕ್ಕೆ ಅನುದಾನ ಒದಗಿಸಿಕೊಡುವುದಾಗಿ ಭರವಸೆ ನೀಡಿದರು.

ADVERTISEMENT

ಮುಖಂಡರಾದ ನೇತಾಜಿ ಪಾಟೀಲ, ರಾಚಯ್ಯ ಸ್ವಾಮಿ,ಶಶಿಧರ ಕೋಸಂಬೆ, ಪಿಕೆಪಿಎಸ್ ಅಧ್ಯಕ್ಷ ರಾಜಕುಮಾರ ಬಿರಾದಾರ, ಟಿಂಕು ರಾಜಭವನ, ರಮೇಶ ಪ್ರಭಾ, ಧನರಾಜ ಪಾಟೀಲ ಹಾಗೂ ಪ್ರಮುಖರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.