ಬೀದರ್: ಇಲ್ಲಿಯ ನೌಬಾದ್ ಸಮೀಪದ ಜ್ಞಾನ ಶಿವಯೋಗಾಶ್ರಮ ಪರಿಸರದಲ್ಲಿ ಶ್ರೀ ವೈಷ್ಣೋದೇವಿ ಕಲ್ಚರಲ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ ವತಿಯಿಂದ ನೂತನ ಗೋಶಾಲೆ ನಿರ್ಮಾಣಕ್ಕೆ ಶ್ರೀಶೈಲದ ಚೈತನ್ಯ ಪೀಠದ ಕರುಣಾದೇವಿ ಮಾತೆ ಭೂಮಿ ಪೂಜೆ ನೆರವೇರಿಸಿದರು.
ದೇಸಿ ತಳಿ ಗೋವುಗಳ ರಕ್ಷಣೆಗೆ ಗೋಶಾಲೆ ಆರಂಭಿಸಲಾಗುತ್ತಿದೆ ಎಂದು ಶ್ರೀ ವೈಷ್ಣೋದೇವಿ ಕಲ್ಚರಲ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸಂಗಮೇಶ ಬಿರಾದಾರ ಹೇಳಿದರು.
ಬೇಮಳಖೇಡ ಹಿರೇಮಠ ಸಂಸ್ಥಾನದ ಡಾ. ರಾಜಶೇಖರ ಶಿವಾಚಾರ್ಯ ಸಾನಿಧ್ಯ ವಹಿಸಿದ್ದರು. ಕೇಂದ್ರ ಜಾಗೃತಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ, ಪಶು ಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಹಂಚನಾಳ, ಬೀದರ್ ಸಹಾಯಕ ನಿರ್ದೇಶಕ ಡಾ. ರವೀಂದ್ರಕುಮಾರ ಭೂರೆ, ಪ್ರದೀಪ್ ರಾಗಾ, ಉಮಾಕಾಂತ ಜೆಮಶೆಟ್ಟೆ, ದತ್ತು ಬಾವಗೆ, ಶಿವರಾಜ ಕೋಟೆ, ಉಮೇಶ ಸಿದ್ಧೇಶ್ವರೆ, ಶಿವಕುಮಾರ ಮುದಕಾ ಇದ್ದರು.
ನೂತನ ಗೋಶಾಲೆಗೆ ಮಾತೇಶ್ವರಿ ಗೋಶಾಲೆ ಎಂದು ನಾಮಕರಣ ಮಾಡಲಾಯಿತು.
ಶಿಕ್ಷಕ ಸುಭಾಷ ಬಿರಾದಾರ ಸ್ವಾಗತಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.