ADVERTISEMENT

ಸುರಿದ ಮಳೆ; ಇಳೆಗೆ ಜೀವ ಕಳೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2020, 11:21 IST
Last Updated 2 ಜೂನ್ 2020, 11:21 IST
ಚಿಟಗುಪ್ಪ ತಾಲ್ಲೂಕಿನ ನಿರ್ಣಾದಲ್ಲಿ ವ್ಯಕ್ತಿಯೊಬ್ಬರು ಮಳೆಯಿಂದ ರಕ್ಷಿಸಿಕೊಳ್ಳಲು ಕೊಡೆ ಹಿಡಿದು ತೆರಳುತ್ತಿರುವುದು
ಚಿಟಗುಪ್ಪ ತಾಲ್ಲೂಕಿನ ನಿರ್ಣಾದಲ್ಲಿ ವ್ಯಕ್ತಿಯೊಬ್ಬರು ಮಳೆಯಿಂದ ರಕ್ಷಿಸಿಕೊಳ್ಳಲು ಕೊಡೆ ಹಿಡಿದು ತೆರಳುತ್ತಿರುವುದು   

ಚಿಟಗುಪ್ಪ: ತಾಲ್ಲೂಕಿನಾದ್ಯಂತ ಸೋಮವಾರ ಉತ್ತಮ ಮಳೆ ಸುರಿಯಿತು. ಕಾದು ಕಾವಲಿಯಂತಾಗಿದ್ದ ಇಳೆ ತಂಪಾಯಿತು. ಸುಡು ಬಿಸಿಲಿನಿಂದ ರೋಸಿ ಹೋಗಿದ್ದ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟರು.

ಮಧ್ಯ ರಾತ್ರಿಯಿಂದ ಬೆಳಿಗ್ಗೆ ವರೆಗೂ ಮಳೆ ಸುರಿಯಿತು. ರಾತ್ರಿ ತಂಪಾದ ಗಾಳಿ ಬೀಸಿದ್ದರಿಂದ ಜನ ನೆಮ್ಮದಿಯಿಂದ ನಿದ್ರೆ ಮಾಡಿದರು. ಕೆಲ ರಸ್ತೆಗಳ ಮೇಲೆ ನೀರು ಸಂಗ್ರಹಗೊಂಡಿತು. ಚರಂಡಿಗಳು ಉಕ್ಕಿ ಹರಿದವು.

ಮೂರು ಗಂಟೆ ಸತತವಾಗಿ ಸುರಿದ ಮಳೆ ಬೇಸಿಗೆಯನ್ನು ಮರೆಯುವಂತೆ ಮಾಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.