ADVERTISEMENT

ಓಮೈಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಸನ್ನದ್ಧ: ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2021, 8:19 IST
Last Updated 6 ಡಿಸೆಂಬರ್ 2021, 8:19 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಬೀದರ್: ‘ರಾಜ್ಯದಲ್ಲಿ ಕ್ಲಸ್ಟರ್‌ಗಳಲ್ಲೇ ಓಮೈಕ್ರಾನ್ ಕಾಣಿಸಿಕೊಂಡಿದೆ. ಚಿಕ್ಕಮಗಳೂರಲ್ಲಿ ಎಲ್ಲ ವಿದ್ಯಾರ್ಥಿಗಳ ತಪಾಸಣೆ ಮಾಡಿ ಹಾಸ್ಟೆಲ್‌ ಶೀಲ್‌ಡೌನ್‌ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಓಮೈಕ್ರಾನ್ ಮೇಲೆ ನಿಗಾ ಇಡಲಾಗಿದೆ. ತಜ್ಞರು ಸೂಚಿಸಿದ ಮಾರ್ಗಸೂಚಿ ಅನುಷ್ಠಾನಗೊಳಿಸಲಾಗಿದೆ. ಅದರ ಪರಿಣಾಮ ಹಾಗೂ ವಿಸ್ತರಣೆ ಬಗ್ಗೆ ತಜ್ಞರ ಸಲಹೆ ಪಡೆದು ಮಾರ್ಗಸೂಚಿಯಲ್ಲಿ ಕಾಲ ಕಾಲಕ್ಕೆ ಬದಲಾವಣೆ ಮಾಡಲಾಗುವುದು. ಓಮೈಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಎಲ್ಲ ರೀತಿಯಿಂದಲೂ ಸನ್ನದ್ಧವಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT