ADVERTISEMENT

ಕಲ್ಯಾಣ ಕರ್ನಾಟಕ ಸಮಿತಿಗೆ ಹಣ್ಮು ಪಾಜಿ ನೇಮಕ

​ಪ್ರಜಾವಾಣಿ ವಾರ್ತೆ
Published 14 ಜನವರಿ 2022, 15:57 IST
Last Updated 14 ಜನವರಿ 2022, 15:57 IST
ಹಣ್ಮು ಪಾಜಿ
ಹಣ್ಮು ಪಾಜಿ   

ಬೀದರ್: ಜಿಲ್ಲೆಯವರೇ ಆದ ಚಿತ್ರನಟ ಹಣ್ಮು ಪಾಜಿ ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಜಿಲ್ಲಾ ಕಲಾವಿದರ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಸಮಿತಿಯ ರಾಜ್ಯ ಅಧ್ಯಕ್ಷ ಲಕ್ಷ್ಮಣ ದಸ್ತಿ ಅವರ ನಿರ್ದೇಶನದ ಮೇರೆಗೆ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಅನಂತರೆಡ್ಡಿ ಟಿ. ಮರ್ಜಾಪೂರ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

27 ವರ್ಷದ ಹಣ್ಮು ಪಾಜಿ ಜಿಲ್ಲೆಯಲ್ಲಿ ಕಲೆ, ಕಲಾವಿದರನ್ನು ಪ್ರೋತ್ಸಾಹಿಸುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈವರೆಗೆ ನಾಲ್ಕು ಕನ್ನಡ ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ತಮ್ಮದೇ ಆದ ಗೆಳೆಯರು ಹಾಗೂ ಅಭಿಮಾನಿಗಳ ಬಳಗ ಹೊಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.