ADVERTISEMENT

ಬೀದರ್: ಸಿಡಿಲು ಬಡಿದು ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 18 ಮೇ 2022, 4:31 IST
Last Updated 18 ಮೇ 2022, 4:31 IST
ಪಾರ್ವತಿ ನಂದಕುಮಾರ
ಪಾರ್ವತಿ ನಂದಕುಮಾರ   

ಬೀದರ್: ಜಿಲ್ಲೆಯ ಬಸವಕಲ್ಯಾಣ, ಹುಲಸೂರ, ಹುಮನಾಬಾದ್ ಹಾಗೂ ಭಾಲ್ಕಿ ತಾಲ್ಲೂಕುಗಳಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದೆ. ಭಾಲ್ಕಿ ತಾಲ್ಲೂಕಿನ ಖಟಕಚಿಂಚೋಳಿ ಗ್ರಾಮದಲ್ಲಿ ಸಿಡಿಲು ಬಡಿದು ಪಾರ್ವತಿ ನಂದಕುಮಾರ (40) ಮೃತಪಟ್ಟಿದ್ದಾರೆ.

‘ಮಂಗಳವಾರ ಹೊಲದಲ್ಲಿ ತೊಗರಿ ಕೊಯ್ಲು ಆರಿಸುತ್ತಿದ್ದಾಗ ಸಿಡಿಲು ಬಡಿದಿದೆ. ಖಟಕಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಪಿಎಸ್ಐ ಶೇಖ್ ಷಾ ಪಟೇಲ್ ತಿಳಿಸಿದ್ದಾರೆ.

ಹುಮನಾಬಾದ್ ಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಗುಡುಗು, ಮಿಂಚು ಹಾಗೂ ಗಾಳಿಯ ಆರ್ಭಟ ಜೋರಾಯಿತು. 4 ಗಂಟೆಗೆ ಗುಡುಗು ಸಹಿತ 15 ನಿಮಿಷ ಮಳೆ ಸುರಿಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.