ADVERTISEMENT

ಹಣಕುಣಿ: ಅನಾಥ ಮಕ್ಕಳಿಗೆ ಸಹಾಯಹಸ್ತ

​ಪ್ರಜಾವಾಣಿ ವಾರ್ತೆ
Published 13 ಜೂನ್ 2021, 15:32 IST
Last Updated 13 ಜೂನ್ 2021, 15:32 IST
ಚಿಟಗುಪ್ಪ ಸಮೀಪದ ಹಣಕುಣಿ ಗ್ರಾಮದ ಅಶ್ವಿನಿ ಹಾಗೂ ಮಹಾನಂದಾ ಅವರಿಗೆ ಬಿಜೆಪಿ ಮುಖಂಡ ಸಿದ್ದು ಪಾಟೀಲ ಸಂಗಡಿಗರು ಭಾನುವಾರ ನಗದು ಹಣ, ಆಹಾರ ಧಾನ್ಯದ ಕಿಟ್‌ ವಿತರಿಸಿದರು
ಚಿಟಗುಪ್ಪ ಸಮೀಪದ ಹಣಕುಣಿ ಗ್ರಾಮದ ಅಶ್ವಿನಿ ಹಾಗೂ ಮಹಾನಂದಾ ಅವರಿಗೆ ಬಿಜೆಪಿ ಮುಖಂಡ ಸಿದ್ದು ಪಾಟೀಲ ಸಂಗಡಿಗರು ಭಾನುವಾರ ನಗದು ಹಣ, ಆಹಾರ ಧಾನ್ಯದ ಕಿಟ್‌ ವಿತರಿಸಿದರು   

ಚಿಟಗುಪ್ಪ: ಸಮೀಪದ ಹಣಕುಣಿ ಗ್ರಾಮದಲ್ಲಿ ಕೋವಿಡ್‌ನಿಂದಾಗಿ ಅಮ್ಮನನ್ನು ಕಳೆದುಕೊಂಡು ಅನಾಥರಾಗಿರುವ ಅಶ್ವಿನಿ ಹಾಗೂ ಮಹಾನಂದಾ ಅವರಿಗೆ ಬಿಜೆಪಿ ಮುಖಂಡರು ಸಹಾಯ ಹಸ್ತ ಚಾಚಿದ್ದಾರೆ.

ಈ ಕುರಿತು ‘ಪ್ರಜಾವಾಣಿ’ ಭಾನುವಾರದ ಸಂಚಿಕೆಯಲ್ಲಿ ‘ಅವ್ವ ನಿತ್ಯ ಕಣ್ಮುಂದೆ ಬರುತ್ತಿದ್ದಾಳೆ’ ಶೀರ್ಷಿಕೆಯಡಿ ಮಾನವೀಯ ವರದಿ ಪ್ರಕಟಿಸಿತ್ತು. ವರದಿಗೆ ಸ್ಪಂದಿಸಿದ ಬಿಜೆಪಿ ಮುಖಂಡ ಡಾ.ಸಿದ್ದು ಪಾಟೀಲ ಮಕ್ಕಳ ಮನೆಗೆ ಭೇಟಿ ನೀಡಿ ಅವರ ಶಿಕ್ಷಣಕ್ಕೆ ₹10 ಸಾವಿರ ನೆರವು ಹಾಗೂ ದಿನಸಿ ಪದಾರ್ಥಗಳನ್ನು ನೀಡಿದ್ದಾರೆ.

ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಬಾಭು ಟೈಗರ್‌, ಗಣ್ಯರಾದ ಗಿರೀಶ್‌ ತುಂಬಾ, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀನಿವಾಸ್‌ ರೆಡ್ಡಿ, ಖಾಜಾಮಿಯ್ಯ, ರುಬಿಟ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.