ADVERTISEMENT

ರಾಜಶೇಖರ ಪಾಟೀಲಎಚ್‌ಕೆಆರ್‌ಡಿಬಿ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2018, 15:33 IST
Last Updated 27 ಸೆಪ್ಟೆಂಬರ್ 2018, 15:33 IST
ರಾಜಶೇಖರ ಬಿ.ಪಾಟೀಲ 
ರಾಜಶೇಖರ ಬಿ.ಪಾಟೀಲ    

ಬೀದರ್‌: ಹೈದರಾಬಾದ್‌ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ(ಎಚ್‌ಕೆಆರ್‌ಡಿಬಿ)ಯ ಅಧ್ಯಕ್ಷರನ್ನಾಗಿ ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಪಾಟೀಲ ಅವರನ್ನು ನೇಮಕ ಮಾಡಲಾಗಿದೆ.

‘ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ, ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ, ಲೋಕಸಭೆಯ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿಶ್ವಾಸದ ಫಲವಾಗಿ ಎರಡು ವರ್ಷಗಳ ಅವಧಿಗೆ ನನ್ನನ್ನು ನೇಮಕ ಮಾಡಲಾಗಿದೆ’ ಎಂದು ರಾಜಶೇಖರ ಪಾಟೀಲ ಇಂಗ್ಲೆಂಡ್‌ನಿಂದ ದೂರವಾಣಿ ಮೂಲಕ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

‘ಬೀದರ್‌ ಜಿಲ್ಲೆಗೆ ಮೊದಲ ಬಾರಿಗೆ ಪ್ರಾತಿನಿಧ್ಯ ದೊರಕಿದೆ. ನನಗೆ ವಹಿಸಿ ಕೊಟ್ಟಿರುವ ಹೊಣೆಯನ್ನು ಸಮರ್ಥವಾಗಿ ನಿಭಾಯಿಸುವೆ. ಹೈದರಾಬಾದ್ ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವೆ’ ಎಂದು ಹೇಳಿದ್ದಾರೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.