ADVERTISEMENT

ಹುಮನಾಬಾದ್: ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2023, 4:24 IST
Last Updated 19 ಫೆಬ್ರುವರಿ 2023, 4:24 IST
ಬೀದರ್ ಜಿಲ್ಲೆಯ ಹುಮನಾಬಾದ್ ಹೊರವಲಯದಲ್ಲಿ ಟ್ರ್ಯಾಕ್ಟರ್‌ಗೆ ಪೂಜೆ ಸಲ್ಲಿಸಿದ ಬಳಿಕ ಬಸವತೀರ್ಥ ಮಠದ ಸಿದ್ದಲಿಂಗ ಸ್ವಾಮೀಜಿ ಪಿಸ್ತೂಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸಿದರು
ಬೀದರ್ ಜಿಲ್ಲೆಯ ಹುಮನಾಬಾದ್ ಹೊರವಲಯದಲ್ಲಿ ಟ್ರ್ಯಾಕ್ಟರ್‌ಗೆ ಪೂಜೆ ಸಲ್ಲಿಸಿದ ಬಳಿಕ ಬಸವತೀರ್ಥ ಮಠದ ಸಿದ್ದಲಿಂಗ ಸ್ವಾಮೀಜಿ ಪಿಸ್ತೂಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸಿದರು   

ಹುಮನಾಬಾದ್: ಪಟ್ಟಣದ ಹೊರವಲಯದಲ್ಲಿ ಬಸವತೀರ್ಥ ಮಠದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಜಮೀನಿನ ಉಳುಮೆಗಾಗಿ ಎರಡು ಟ್ರ್ಯಾಕ್ಟರ್‌ಗಳಿಗೆ ಪೂಜೆ ಸಲ್ಲಿಸಿದ ಬಳಿಕ ಸಿದ್ದಲಿಂಗ ಸ್ವಾಮೀಜಿ ಶುಕ್ರವಾರ ಗಾಳಿಯಲ್ಲಿ ಗುಂಡು ಹಾರಿಸಿದರು.

‘ಮಠಕ್ಕೆ ಸೇರಿದ ಜಮೀನುಗಳ ಉಳುಮೆ ನಡೆದಿದೆ. ಆದರೆ, ಮಠಕ್ಕೆ ಸೇರಿದ ಹೊಲಗಳ ಬದಿ ಇರುವ ಜಮೀನುಗಳನ್ನು ತಮ್ಮ ಅಧೀನಕ್ಕೆ ಪಡೆಯಲು ಸ್ವಾಮೀಜಿ ಈ ರೀತಿ ಮಾಡಿದ್ದಾರೆ. ನಾವು ಇದರ ಬಗ್ಗೆ ಪೊಲೀಸರಿಗೆ ದೂರು ನೀಡುತ್ತೇವೆ’ ಎಂದು ಕಲ್ಲೂರ್ ತಾಂಡಾದ ನಿವಾಸಿಗಳಾದ ಸೋಮಲು ನಾಯಕ ಅವರು ತಿಳಿಸಿದ್ದಾರೆ.

ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಇನ್ನೂ ಪ್ರಕರಣ ದಾಖಲಾಗಿಲ್ಲ.

ADVERTISEMENT

ಘಟನೆ ಕುರಿತು ಪ್ರತಿಕ್ರಿಯೆ ಪಡೆಯಲು ಸ್ವಾಮೀಜಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸಲಾಯಿತು. ಆದರೆ, ಅವರು ದೂರವಾಣಿ ಕರೆ ಸ್ವೀಕರಿಸಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.