
ಪ್ರಜಾವಾಣಿ ವಾರ್ತೆಬೀದರ್: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ಅಕ್ರಮವಾಗಿ ಕಲ್ಲು ಗಣಿಗಾರಿಕೆಗೆ ಬಳಸುತ್ತಿದ್ದ ನಾಲ್ಕು ವಾಹನ ಹಾಗೂ ಎರಡು ಟಿಲ್ಲರ್ಗಳನ್ನು ಗುರುವಾರ ಜಪ್ತಿ ಮಾಡಿದ್ದಾರೆ.
ತಾಲ್ಲೂಕಿನ ಮನ್ನಳ್ಳಿ ಗ್ರಾಮದ ಪಟ್ಟಾ ಜಮೀನಿನಲ್ಲಿ ಅಕ್ರಮವಾಗಿ ಲ್ಯಾಟ್ರೈಟ್ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿಯ ಮೇರೆಗೆ ಗುರುವಾರ ಬೆಳಗಿನ ಜಾವ ಆರು ಗಂಟೆಗೆ ದಾಳಿ ನಡೆಸಲಾಗಿದೆ. ತಲಾ ಎರಡು ಲಾರಿ, ಟ್ರ್ಯಾಕ್ಟರ್ ಹಾಗೂ ಟಿಲ್ಲರ್ ಯಂತ್ರ ಜಪ್ತಿ ಮಾಡಿ, ಮನ್ನಳ್ಳಿ ಠಾಣೆಗೆ ದೂರು ಸಲ್ಲಿಸಲಾಗಿದೆ.
ಹಿರಿಯ ಭೂ ವಿಜ್ಞಾನಿಗಳಾದ ವಿಶ್ವನಾಥ್, ಧನರಾಜ್, ಲೋಕೇಶ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.