ಬಸವಕಲ್ಯಾಣ: ತಾಲ್ಲೂಕಿನ ಉಜಳಂಬದಲ್ಲಿ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 100 ಕ್ವಿಂಟಲ್ ಅಕ್ಕಿಯನ್ನು ಇಲ್ಲಿನ ಆಹಾರ ಇಲಾಖೆ ಅಧಿಕಾರಿಗಳು ಈಚೆಗೆ ವಶಪಡಿಸಿಕೊಂಡಿದ್ದಾರೆ.
ಕಲಬುರ್ಗಿಯಿಂದ ಉಮರ್ಗಾಕ್ಕೆ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಲಾರಿಯಲ್ಲಿ ₹2.70 ಲಕ್ಷ ಮೌಲ್ಯದ 200 ಚೀಲ ಅಕ್ಕಿ ಇತ್ತು. ಲಾರಿ ಸಮೇತ ಅಕ್ಕಿಯನ್ನು ಆಹಾರ ನಿರೀಕ್ಷಕ ರಾಜೇಂದ್ರ ಅವರು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಮಂಠಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.