ಬೀದರ್: ಡಾ. ಬಿ.ಆರ್. ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮ ಇಲ್ಲಿಯ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಪರಿಶಿಷ್ಟ ಜಾತಿ (ಎಸ್ಸಿ) ವಿಭಾಗದ ವತಿಯಿಂದ ಸೋಮವಾರ ನಡೆಯಿತು.
ಎಐಸಿಸಿ ವಕ್ತಾರರಾದ ವಿಧಾನ ಪರಿಷತ್ ಚುನಾವಣೆಯ ಬೀದರ್ ಕ್ಷೇತ್ರದ ಪಕ್ಷದ ವೀಕ್ಷಕ ಡಾ. ಶ್ರವಣ್ ಅವರು ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾರ್ಲಾಪಣೆ ಮಾಡಿ ಗೌರವಿಸಿದರು.
ಡಾ. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಲ್ಲಿ ದಲಿತರು, ಶೋಷಿತರು, ಹಿಂದುಳಿದ ವರ್ಗದವರು ಸೇರಿದಂತೆ ಸರ್ವರಿಗೂ ಸಮಾನ ಹಕ್ಕು ನೀಡಿದ್ದಾರೆ. ದೇಶಕ್ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಸ್ಮರಿಸಿದರು.
ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಜಿಲ್ಲಾ ಪರಿಶಿಷ್ಟ ಜಾತಿ (ಎಸ್ಸಿ) ವಿಭಾಗದ ಅಧ್ಯಕ್ಷ ಡಿ.ಕೆ. ಸಂಜುಕುಮಾರ, ಮುಖಂಡರಾದ ವಿಜಯಕುಮಾರ ಮೋರ್ಗಿಕರ್, ಶಾಮರಾವ್ ಬಂಬಳಗಿ, ಲೋಕೇಶ ಮಂಗಲಗಿ, ಶಶಿಧರ ಭಾಸನ್, ಅಮರ ಸಾಗರ್, ರವೀಂದ್ರ, ವಿಶಾಲ ದೊಡ್ಡಿ, ಶಾಮಸುಂದರ ಪಾಟೀಲ, ಸಂಜು ರಾಮದಾಸ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.