ADVERTISEMENT

ಬೀದರ್: ಶೈಕ್ಷಣಿಕ ಸಾಲ ಮನ್ನಾಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 14 ಜುಲೈ 2021, 16:39 IST
Last Updated 14 ಜುಲೈ 2021, 16:39 IST
ತಾಹೀರ್ ಹುಸೇನ್
ತಾಹೀರ್ ಹುಸೇನ್   

ಬೀದರ್: ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಮನ್ನಾ ಮಾಡಬೇಕು ಎಂದು ವೆಲ್‍ಫೇರ್ ಪಾರ್ಟಿ ಆಫ್ ಇಂಡಿಯಾ ಒತ್ತಾಯಿಸಿದೆ.

ರಾಜ್ಯದಲ್ಲಿ ಬಡ ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಬ್ಯಾಂಕ್‍ಗಳಿಂದ ಶೈಕ್ಷಣಿಕ ಸಾಲ ಪಡೆದಿದ್ದಾರೆ. ಕೋವಿಡ್‍ನಿಂದ ಪಾಲಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ವಿದ್ಯಾರ್ಥಿ ಶಿಕ್ಷಣಕ್ಕೂ ಅಡಚಣೆ ಉಂಟಾಗಿದೆ. ಹೀಗಾಗಿ ಸರ್ಕಾರ ಸಾಲ ಮನ್ನಾ ಮಾಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು ಎಂದು ಪಾರ್ಟಿಯ ರಾಜ್ಯ ಘಟಕದ ಅಧ್ಯಕ್ಷ ತಾಹೀರ್ ಹುಸೇನ್ ಬೇಡಿಕೆ ಮಂಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT