ADVERTISEMENT

ಬೀದರ್: ಪತ್ರಿಕಾ ಭವನ ಕಾಮಗಾರಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2021, 14:54 IST
Last Updated 6 ಜೂನ್ 2021, 14:54 IST
ಬೀದರ್‌ನ ಆನಂದನಗರದ ಪತ್ರಿಕಾ ಭವನಕ್ಕೆ ಶನಿವಾರ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ ಸಚಿವ ಪ್ರಭು ಚವಾಣ್ ಅವರು ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಭವನದ ಆವರಣದಲ್ಲಿ ಸಸಿ ನೆಟ್ಟು ನೀರೆರೆದರು
ಬೀದರ್‌ನ ಆನಂದನಗರದ ಪತ್ರಿಕಾ ಭವನಕ್ಕೆ ಶನಿವಾರ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ ಸಚಿವ ಪ್ರಭು ಚವಾಣ್ ಅವರು ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಭವನದ ಆವರಣದಲ್ಲಿ ಸಸಿ ನೆಟ್ಟು ನೀರೆರೆದರು   

ಬೀದರ್: ಇಲ್ಲಿನ ಆನಂದ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಪತ್ರಿಕಾ ಭವನದ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಶನಿವಾರ ಪರಿಶೀಲಿಸಿದರು.

ಕೋವಿಡ್ ಸಂದರ್ಭದಲ್ಲೂ ಭವನದ ಕಾಮಗಾರಿ ಮುಂದುವರಿಸಿರುವ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಜಿ.ಕೆ. ಕನ್‍ಸ್ಟ್ರಕ್ಷನ್ಸ್ ಮಾಲೀಕರ ಕಾರ್ಯವನ್ನು ಶ್ಲಾಘಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕಕುಮಾರ ಕರಂಜಿ ಅವರು ಸಚಿವರನ್ನು ಸನ್ಮಾನಿಸಿದರು.

ADVERTISEMENT

ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಬಿಜೆಪಿ ಮುಖಂಡ ಗುರುನಾಥ ಕೊಳ್ಳೂರ್, ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಎನ್. ಲಿಂಗರಾಜ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ ಖಂಡ್ರೆ, ಕಿರಿಯ ಎಂಜಿನಿಯರ್ ಕುಪ್ಪಣ್ಣ, ಜಿ.ಕೆ. ಕನ್‍ಸ್ಟ್ರಕ್ಷನ್ಸ್ ವ್ಯವಸ್ಥಾಪಕ ನಿರ್ದೇಶಕ ಸಚಿನ್ ಕೊಳ್ಳೂರ, ನಾಗಶೆಟ್ಟಿ ಧರಂಪುರ, ಶಿವಕುಮಾರ ಸ್ವಾಮಿ, ಸುನೀಲಕುಮಾರ ಕುಲಕರ್ಣಿ, ಪೃಥ್ವಿರಾಜ್ ಎಸ್, ಶಿವಕುಮಾರ ಸದಲಾಪುರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.