ADVERTISEMENT

ಔರಾದ್: ಶಿವ-ಪಾರ್ವತಿ ಮೂರ್ತಿ ಪ್ರತಿಷ್ಠಾಪನೆ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2024, 5:18 IST
Last Updated 28 ಫೆಬ್ರುವರಿ 2024, 5:18 IST
ಔರಾದ್ ತಾಲ್ಲೂಕಿನ ಯನಗುಂದಾ ಗ್ರಾಮದಲ್ಲಿ ನಡೆದ ಮೆರವಣಿಗೆಯಲ್ಲಿ ಭಕ್ತರು ಪಾಲ್ಗೊಂಡರು
ಔರಾದ್ ತಾಲ್ಲೂಕಿನ ಯನಗುಂದಾ ಗ್ರಾಮದಲ್ಲಿ ನಡೆದ ಮೆರವಣಿಗೆಯಲ್ಲಿ ಭಕ್ತರು ಪಾಲ್ಗೊಂಡರು   

ಔರಾದ್: ತಾಲ್ಲೂಕಿನ ಯನಗುಂದಾ ಗ್ರಾಮದಲ್ಲಿ ಸೋಮವಾರ ಸಂಜೆ ಭಕ್ತರ ಹರ್ಷೋಲ್ಲಾಸ ಹಾಗೂ ಜಯಘೋಷಣೆ ನಡುವೆ ಶಿವ-ಪಾರ್ವತಿ ಮೂರ್ತಿ ಪ್ರತಿಷ್ಠಾಪಿಸಲಾಯಿತು.

ಹಣೆಗಾಂವ್ ಮಠದ ಶಂಕರಲಿಂಗ ಸ್ವಾಮೀಜಿ, ಡಾಕುಳಗಿಯ ಚನ್ನಬಸವೇಶ್ವರ ಸ್ವಾಮೀಜಿ, ಮಹಾದೇವ ಸ್ವಾಮೀಜಿ, ಮಲ್ಲಯ್ಯ ಸ್ವಾಮೀಜಿ ಅವರು ಧಾರ್ಮಿಕ ವಿಧಿ ವಿಧಾನದ ಮೂಲಕ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿಸಿದರು.

ಹಣೆಗಾಂವ್ ಮಠದ ಶಂಕರಲಿಂಗ ಸ್ವಾಮೀಜಿ ಮಾತನಾಡಿ,‘ಯನಗುಂದಾ ಭಕ್ತರು ಧಾರ್ಮಿಕ ಕಾರ್ಯಕ್ರಮ ನಡೆಸಿ ಯುವ ಪೀಳಿಗೆಯಲ್ಲಿ ಉತ್ತಮ ಸಂಸ್ಕಾರ ಬಿತ್ತಿದ್ದಾರೆ. ಸಮಾಜದಲ್ಲಿ ಸದಾ ಇಂತಹ ಕಾರ್ಯ ನೆರವೇರಬೇಕು’ ಎಂದು ಹೇಳಿದರು.

ADVERTISEMENT

‘ಎಲ್ಲಿ ಭಕ್ತಿ ಇರುತ್ತದೆ, ಅಲ್ಲಿ ದೇವರು ಇರುತ್ತಾನೆ. ದೇವರು ಎಂದ ಕ್ಷಣ ಮನುಷ್ಯನಲ್ಲಿ ಭಯ, ಭಕ್ತಿ ಇರುತ್ತದೆ. ಇದರಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ನೆಲೆಸುತ್ತದೆ’ ಎಂದು ತಿಳಿಸಿದರು.

ಮುಖಂಡ ಗುಂಡಯ್ಯ ಸ್ವಾಮಿ, ಗುರಯ್ಯ ಸ್ವಾಮಿ, ವಿಜಯಕುಮಾರ ಮೇತ್ರೆ, ಕಲ್ಲಯ್ಯ ಸ್ವಾಮಿ, ಗುರುಪಾದಪ್ಪ ಕೋರೆ, ಸಿದ್ರಾಮ ಕೋರೆ, ಅಶೋಕ ಶೆಟಕಾರ, ಕೃಷ್ಣ ಕಾಂಬಳೆ, ಬಸವರಾಜ ಪಾಟೀಲ, ಸಿದ್ದು ಪಾಟೀಲ, ಸಿದ್ದು ಹಂಗರಗೆ, ಪ್ರಭು ಪಾಟೀಲ, ಉಮಾಕಾಂತ ಮೊರೆ, ಬಸವರಾಜ ವಾಡೆ ಇದ್ದರು.

ಯನಗುಂದಾ ಹಾಗೂ ಸುತ್ತಲಿನ ಗ್ರಾಮಗಳ ಅಪಾರ ಸಂಖ್ಯೆ ಭಕ್ತರು ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.