ADVERTISEMENT

ಪ್ರವಚನದಿಂದ ಅಂತರಂಗ ಪರಿಶುದ್ಧ

ಬಸವ ದರ್ಶನ ಪ್ರವಚನ ಸಮಾರೋಪದಲ್ಲಿ ಪಟ್ಟದ್ದೇವರ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2021, 17:01 IST
Last Updated 8 ಸೆಪ್ಟೆಂಬರ್ 2021, 17:01 IST
ಬೀದರ್‌ನ ಡಾ. ಚನ್ನಬಸವ ಪಟ್ಟದ್ದೇವರು ಪ್ರಸಾದ ನಿಲಯದಲ್ಲಿ ನಡೆದ ಬಸವ ದರ್ಶನ ಪ್ರವಚನ ಸಮಾರೋಪ ಸಮಾರಂಭದಲ್ಲಿ ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಮಾತನಾಡಿದರು. ಜೈರಾಜ ಖಂಡ್ರೆ, ಬಾಬುವಾಲಿ, ಬಸವರಾಜ ಧನ್ನೂರ, ಮಹಾಲಿಂಗ ಸ್ವಾಮೀಜಿ, ಗುರುಬಸವ ಪಟ್ಟದ್ದೇವರು, ಶಕುಂತಲಾ ಬೆಲ್ದಾಳೆ, ಪ್ರೊ. ಎಸ್.ಬಿ. ಬಿರಾದಾರ ಇದ್ದರು
ಬೀದರ್‌ನ ಡಾ. ಚನ್ನಬಸವ ಪಟ್ಟದ್ದೇವರು ಪ್ರಸಾದ ನಿಲಯದಲ್ಲಿ ನಡೆದ ಬಸವ ದರ್ಶನ ಪ್ರವಚನ ಸಮಾರೋಪ ಸಮಾರಂಭದಲ್ಲಿ ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಮಾತನಾಡಿದರು. ಜೈರಾಜ ಖಂಡ್ರೆ, ಬಾಬುವಾಲಿ, ಬಸವರಾಜ ಧನ್ನೂರ, ಮಹಾಲಿಂಗ ಸ್ವಾಮೀಜಿ, ಗುರುಬಸವ ಪಟ್ಟದ್ದೇವರು, ಶಕುಂತಲಾ ಬೆಲ್ದಾಳೆ, ಪ್ರೊ. ಎಸ್.ಬಿ. ಬಿರಾದಾರ ಇದ್ದರು   



ಬೀದರ್: ಪ್ರವಚನಗಳಿಂದ ಅಂತರಂಗ ಪರಿಶುದ್ಧವಾಗುತ್ತದೆ. ಹೃದಯ, ಮನಸ್ಸಿಗೆ ಆನಂದ ದೊರಕುತ್ತದೆ ಎಂದು ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ನುಡಿದರು.

ಇಲ್ಲಿಯ ವಿದ್ಯಾನಗರ ಕಾಲೊನಿಯ ಡಾ. ಚನ್ನಬಸವ ಪಟ್ಟದ್ದೇವರು ಪ್ರಸಾದ ನಿಲಯದಲ್ಲಿ ನಡೆದ ಬಸವ ದರ್ಶನ ಪ್ರವಚನ ಸಮಾರೋಪ ಸಮಾರಂಭದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಬಸವಾದಿ ಶರಣರು ಸಂಸಾರದಲ್ಲಿದ್ದುಕೊಂಡು ಆಧ್ಯಾತ್ಮದ ಮಹಾ ಬೆಳಕಲ್ಲಿ ನೆಮ್ಮದಿಯ ಬದುಕು ಸಾಗಿಸಿದ್ದರು. ಅಂತಹ ಬದುಕು ಎಲ್ಲರದ್ದಾಗಬೇಕು ಎಂದು ತಿಳಿಸಿದರು.

ADVERTISEMENT

ಮಹಾಲಿಂಗ ಸ್ವಾಮೀಜಿ, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ ಮಾತನಾಡಿದರು.

ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸಿದ್ದರು. ಶ್ರಾವಣ ಮಾಸ ಸಮಿತಿಯ ಅಧ್ಯಕ್ಷ ನೀಲಕಂಠ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಶಕುಂತಲಾ ಬೆಲ್ದಾಳೆ, ಡಾ. ದೇವಿಕಾ ನಾಗೂರೆ, ಜಯರಾಜ ಖಂಡ್ರೆ, ಶಾಂತಾ ಖಂಡ್ರೆ, ಪ್ರೊ. ಎಸ್.ಬಿ. ಬಿರಾದಾರ, ಶ್ರೀಕಾಂತ ಬಿರಾದಾರ, ಪ್ರಸಾದ ನಿಲಯದ ವ್ಯವಸ್ಥಾಪಕ ಶ್ರೀಕಾಂತ ಸ್ವಾಮಿ ಉಪಸ್ಥಿತರಿದ್ದರು.

ಪಿ. ಶಶಿಕಲಾ ಬಸವ ಪೂಜೆ ನೆರವೇರಿಸಿದರು. ವಚನಶ್ರೀ, ಚನ್ನಬಸಪ್ಪ ನೌಬಾದೆ ಹಾಗೂ ಸಂಜೀವಕುಮಾರ ಸ್ವಾಮಿ ವಚನ ಗಾಯನ ನಡೆಸಿಕೊಟ್ಟರು. ಯೋಗೇಂದ್ರ ಯದಲಾಪುರೆ ನಿರೂಪಿಸಿದರು. ಪ್ರೊ. ಉಮಾಕಾಂತ ಮೀಸೆ ಸ್ವಾಗತಿಸಿದರು. ಲಕ್ಷ್ಮೀಬಾಯಿ ಬಿರಾದಾರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.