ADVERTISEMENT

‘ಟಿಕೆಟ್ ಆಕಾಂಕ್ಷಿಗಳಲ್ಲಿ ಅತೃಪ್ತಿ ಇಲ್ಲ’

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2021, 6:46 IST
Last Updated 15 ಏಪ್ರಿಲ್ 2021, 6:46 IST
ಬಸವಕಲ್ಯಾಣದ ಬಿಜೆಪಿ ಕಚೇರಿಯಲ್ಲಿ ನಡೆದ ಡಾ.ಅಂಬೇಡ್ಕರ್ ಜಯಂತಿಯಲ್ಲಿ ಪಕ್ಷದ ಅಧ್ಯಕ್ಷ ಅಶೋಕ ವಕಾರೆ, ಸೂರ್ಯಕಾಂತ ಚಿಲ್ಲಾಬಟ್ಟೆ ಇದ್ದರು
ಬಸವಕಲ್ಯಾಣದ ಬಿಜೆಪಿ ಕಚೇರಿಯಲ್ಲಿ ನಡೆದ ಡಾ.ಅಂಬೇಡ್ಕರ್ ಜಯಂತಿಯಲ್ಲಿ ಪಕ್ಷದ ಅಧ್ಯಕ್ಷ ಅಶೋಕ ವಕಾರೆ, ಸೂರ್ಯಕಾಂತ ಚಿಲ್ಲಾಬಟ್ಟೆ ಇದ್ದರು   

ಬಸವಕಲ್ಯಾಣ: ‘ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಬಯಸಿದ್ದ ಇತರೆ ಆಕಾಂಕ್ಷಿಗಳಲ್ಲಿ ಶರಣು ಸಲಗರ ಅಭ್ಯರ್ಥಿಯಾದ ಬಗ್ಗೆ ಅತೃಪ್ತಿ ಇಲ್ಲ. ಎಲ್ಲರೂ ಕ್ಷೇತ್ರದಲ್ಲಿ ಭರಾಟೆಯ ಪ್ರಚಾರ ಕೈಗೊಂಡಿದ್ದೇವೆ’ ಎಂದು ಟಿಕೆಟ್‌ ಆಕಾಂಕ್ಷಿಗಳಲ್ಲೊಬ್ಬರಾದ ಸೂರ್ಯಕಾಂತ ಚಿಲ್ಲಾಬಟ್ಟೆ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಡಾ.ಅಂಬೇಡ್ಕರ್ ಜಯಂತಿ ಆಚರಣೆ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ಟಿಕೆಟ್‌ಗೆ ಪೈಪೋಟಿ ಇರುವುದು ಸಹಜ. ನಂತರದಲ್ಲಿ ಎಲ್ಲರೂ ಕೈಜೋಡಿಸಿ ಕೆಲಸ ಮಾಡಬೇಕಾಗುತ್ತದೆ. ಪಕ್ಷವೇ ನಮಗೆಲ್ಲರಿಗೆ ಮುಖ್ಯವಾಗಿದೆ. ಆದ್ದರಿಂದ ಬಿಜೆಪಿ ಗೆಲುವಿಗೆ ಮುಖ್ಯಮಂತ್ರಿಯವರ, ಸಚಿವರ, ಪಕ್ಷದ ಮುಖಂಡರ, ಪದಾಧಿಕಾರಿಗಳ ಜತೆಯಲ್ಲಿ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿದ್ದೇವೆ. ಅಭ್ಯರ್ಥಿ ಶರಣು ಸಲಗರ 25 ಸಾವಿರಕ್ಕೂ ಅಧಿಕ ಮತಗಳಿಂದ ಜಯಗಳಿಸುವುದು ನಿಶ್ಚಿತ’ ಎಂದರು.

ADVERTISEMENT

ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ವಕಾರೆ ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ನೆರವೇರಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ ಗುಂಡುರೆಡ್ಡಿ, ಸುಧೀರ ಕಾಡಾದಿ, ಪ್ರಮುಖರಾದ ಪ್ರದೀಪ ವಾತಡೆ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಅನಿಲ ಭೂಸಾರೆ, ಲತಾ ಹಾರಕೂಡೆ, ಸಂಜೀವ ಜಾಧವ, ಹಣಮಂತ ಧನಶೆಟ್ಟಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.