ಬೀದರ್: ಜಿಲ್ಲೆಯ ವಿವಿಧೆಡೆ ಭಾನುವಾರ ಅರ್ಧ ಗಂಟೆ ಮಳೆಯಾಗಿದೆ. ಬೀದರ್, ಕಮಲನಗರ, ಭಾಲ್ಕಿ, ಹುಲಸೂರು ಹಾಗೂ ಹುಮನಾಬಾದ್ನಲ್ಲಿ ಸಾಧಾರಣ ಮಳೆಯಾಗಿದೆ.
ಮಳೆಯಿಂದಾಗಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ನಡಿಗೆ ಕಾರ್ಯಕ್ರಮಕ್ಕೆ ಸ್ವಲ್ಪ ತೊಡಕಾಯಿತು. ಜಿಟಿ ಜಿಟಿ ಮಳೆಯಲ್ಲೇ ಜನ ತೊಯ್ದುಕೊಂಡು ಪಾಲ್ಗೊಳ್ಳಬೇಕಾಯಿತು.
ಸೋಮವಾರ ದಿನವೀಡಿ ಮೋಡ ಕವಿದ ವಾತಾವರಣ ಇರಲಿದ್ದು, ಬೆಳಿಗ್ಗೆಯಿಂದ ಜಿಟಿ ಜಿಟಿ ಮಳೆ ಸುರಿಯುವ ಸಾಧ್ಯತೆ ಇದೆ. ಆಗಸ್ಟ್ 16ರಂದು ಔರಾದ್, ಹುಮನಾಬಾದ್, ಬಸವಕಲ್ಯಾಣ, ಬೀದರ್, ಭಾಲ್ಕಿ ಹಾಗೂ ಕಮಲನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.