ADVERTISEMENT

ಜನ ಸಂಕಲ್ಪ ಯಾತ್ರೆಗೆ ನಾಯಕರ ದಂಡು

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2022, 5:17 IST
Last Updated 18 ಅಕ್ಟೋಬರ್ 2022, 5:17 IST
ಔರಾದ್ ಪಟ್ಟಣದಲ್ಲಿ ನಡೆಯಲಿರುವ ಬಿಜೆಪಿ ಜನ ಸಂಕಲ್ಪ ಯಾತ್ರೆಯ ಸಿದ್ಧತೆಯನ್ನು ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಪರಿಶೀಲಿಸಿದರು
ಔರಾದ್ ಪಟ್ಟಣದಲ್ಲಿ ನಡೆಯಲಿರುವ ಬಿಜೆಪಿ ಜನ ಸಂಕಲ್ಪ ಯಾತ್ರೆಯ ಸಿದ್ಧತೆಯನ್ನು ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಪರಿಶೀಲಿಸಿದರು   

ಔರಾದ್: ಪಟ್ಟಣದಲ್ಲಿ ಮಂಗಳವಾರ ನಡೆಯಲಿರುವ ಬಿಜೆಪಿ ಜನ ಸಂಕಲ್ಪ ಯಾತ್ರೆಗೆ ಭರದ ಸಿದ್ಧತೆ ನಡೆಯುತ್ತಿದೆ.

ಪಟ್ಟಣದ ಅಮರೇಶ್ವರ ಕಾಲೇಜಿನ ಹಿಂಭಾಗದ ಆವರಣದಲ್ಲಿ ದೊಡ್ಡ ಪೆಂಡಾಲ್ ಸಿದ್ದಗೊಂಡಿದೆ. ಸುಮಾರು 40 ಸಾವಿರ ಜನ ಕೂಡಲು ವ್ಯವಸ್ಥೆ ಮಾಡಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ‌ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಭಗವಂತ ಖೂಬಾ, ಸಚಿವ ಬಿ. ಶ್ರೀರಾಮಲು ಸೇರಿದಂತೆ ಬಿಜೆಪಿಯ ರಾಜ್ಯ ಮಟ್ಟದ ಮುಖಂಡರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT