ADVERTISEMENT

ಗ್ರಾಮಸ್ಥರೊಂದಿಗೆ ಶಾಸಕ ಬಂಡೆಪ್ಪ ಕಾಶೆಂಪೂರ ಸಭೆ

​ಪ್ರಜಾವಾಣಿ ವಾರ್ತೆ
Published 17 ಮೇ 2020, 13:28 IST
Last Updated 17 ಮೇ 2020, 13:28 IST
ಬೀದರ್‌ ತಾಲ್ಲೂಕಿನ ಸಂಗೋಳಗಿಯಲ್ಲಿ ಜಲ ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ಬಂಡೆಪ್ಪ ಕಾಶೆಂಪೂರ
ಬೀದರ್‌ ತಾಲ್ಲೂಕಿನ ಸಂಗೋಳಗಿಯಲ್ಲಿ ಜಲ ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ಬಂಡೆಪ್ಪ ಕಾಶೆಂಪೂರ   

ಜನವಾಡ: ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಕಾಶೆಂಪೂರ ಬೀದರ್‌ ತಾಲ್ಲೂಕಿನ ಸಂಗೋಳಗಿ ಗ್ರಾಮದ ಜಲ ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಸಂಬಂಧಪಟ್ಟ ಅಧಿಕಾರಿಗಳೊಂಧಿಗೆ ಕುಡಿಯುವ ನೀರಿನ ಸಮಸ್ಯೆ ಕುರಿತು ಚರ್ಚಿಸಿದರು. ಬಳಿಕ ಗ್ರಾಮಸ್ಥರೊಂದಿಗೆ ಸಭೆ ನಡೆಸಿದರು.

ಉಪ ಜೀವನಕ್ಕಾಗಿ ಬೇರೆಡೆ ಹೋಗಿದ್ದ ನಾವು ಲಾಕ್‌ಡೌನ್‌ ನಂತರ ಊರಿಗೆ ಮರಳಿದ್ದೇವೆ. ನಮಗೆ ಉದ್ಯೋಗ ಕಲ್ಪಿಸಬೇಕು ಎಂದು ಕಾರ್ಮಿಕರು ಮನವಿ ಮಾಡಿದರು. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಉದ್ಯೋಗ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಕಾಶೆಂಪೂರ ಭರವಸೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.