ADVERTISEMENT

ಶ್ರದ್ಧಾ ಕೇಂದ್ರಗಳಲ್ಲಿ ಜನತಾ ಜಲಧಾರೆ ರಥಯಾತ್ರೆ ಸಂಚಾರ

ಗುರುದ್ವಾರದಲ್ಲಿ ಅಮೃತ ಕುಂಡದ ಜಲ ಸಂಗ್ರಹಿಸಿದ ಜೆಡಿಎಸ್ ಕಾರ್ಯಕರ್ತರು

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2022, 14:45 IST
Last Updated 20 ಏಪ್ರಿಲ್ 2022, 14:45 IST
ಬೀದರ್ ನಗರದ ಪಾಪನಾಶ ದೇಗುಲ ಪರಿಸರದಲ್ಲಿ ಜಾತ್ಯತೀತ ಜನತಾ ದಳದ ಜನತಾ ಜಲಧಾರೆ ರಥಯಾತ್ರೆಗೆ ಸ್ವಾಗತ ಕೋರಲಾಯಿತು
ಬೀದರ್ ನಗರದ ಪಾಪನಾಶ ದೇಗುಲ ಪರಿಸರದಲ್ಲಿ ಜಾತ್ಯತೀತ ಜನತಾ ದಳದ ಜನತಾ ಜಲಧಾರೆ ರಥಯಾತ್ರೆಗೆ ಸ್ವಾಗತ ಕೋರಲಾಯಿತು   

ಬೀದರ್: ಜಾತ್ಯತೀತ ಜನತಾ ದಳದ ಜನತಾ ಜಲಧಾರೆ ರಥಯಾತ್ರೆಯು ಬುಧವಾರ ನಗರದ ಶ್ರದ್ಧಾ ಕೇಂದ್ರಗಳಲ್ಲಿ ಸಂಚರಿಸಿತು.


ರಥಯಾತ್ರೆಯೊಂದಿಗೆ ಗುರುದ್ವಾರಕ್ಕೆ ಬಂದ ಜೆಡಿಎಸ್ ಕಾರ್ಯಕರ್ತರು ಗುರುಗ್ರಂಥ ಸಾಹೀಬ್ ದರ್ಶನ ಪಡೆದರು. ಅಮೃತ ಕುಂಡದಲ್ಲಿನ ಪವಿತ್ರ ಜಲ ಬಿಂದಿಗೆಯಲ್ಲಿ ತುಂಬಿಕೊಂಡು ಕುಂಭ ಕಳಸದೊಂದಿಗೆ ಮೆರವಣಿಗೆ ನಡೆಸಿ, ರಥದಲ್ಲಿ ಸಂಗ್ರಹಿಸಿದರು.


ಬಳಿಕ ಐತಿಹಾಸಿಕ ಪಾಪನಾಶ ದೇಗುಲಕ್ಕೆ ತೆರಳಿ ಅಭಿಷೇಕ, ವಿಶೇಷ ಪೂಜೆ ಸಲ್ಲಿಸಿದರು. ರಥಕ್ಕೂ ಪೂಜೆಗೈದರು.

ADVERTISEMENT


ಧಾರ್ಮಿಕ ಸ್ಥಳಗಳಲ್ಲಿ ರಥಯಾತ್ರೆಗೆ ಪಟಾಕಿ ಸಿಡಿಸಿ, ಬಾಂಡ್ ಬಾಜಾಗಳೊಂದಿಗೆ ಅದ್ಧೂರಿ ಸ್ವಾಗತ ದೊರೆಯಿತು. ಜಾತ್ಯತೀತ ಜನತಾ ದಳ ಹಾಗೂ ಪಕ್ಷದ ನಾಯಕರಿಗೆ ಜಯಕಾರದ ಘೋಷಣೆ ಮೊಳಗಿದವು.


ವಿಧಾನಸಭೆಯ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪೂರ, ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿಯೂ ಆದ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ ಸೋಲಪೂರ, ನಗರಸಭೆ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮಿ ಆರ್. ಪಾಟೀಲ ಸೋಲಪೂರ, ಮಾಜಿ ಉಪಾಧ್ಯಕ್ಷೆ ಶಾಲಿನಿ ಚಿಂತಾಮಣಿ, ಸದಸ್ಯ ರಾಜು ಚಿಂತಾಮಣಿ, ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಪಾಟೀಲ ಹಾರೂರಗೇರಿ, ಮುಖಂಡರಾದ ಮಾರುತಿ ಬೌದ್ಧೆ, ಶಿವಕುಮಾರ ಭಾವಿಕಟ್ಟಿ, ಸಂಗಮೇಶ ಚಿದ್ರಿ, ಅರುಣ ಹೋತಪೇಟ, ನವಾಜ್‍ಖಾನ್, ಐಲಿನ್‍ಜಾನ್ ಮಠಪತಿ, ಸಂಗಮ್ಮ ಪಾಟೀಲ, ಲತಾ ಕೌರ್ ಮೊದಲಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.