ಭಾಲ್ಕಿ: ತಾಲ್ಲೂಕಿನ ಕಾಸರತೂಗಾಂವ ವಾಡಿ ಗ್ರಾಮದ ಶಿವಶಂಕರ ಗುರುಬಸಯ್ಯ ಮಾಮೂಡಗೆ ಅವರ ಮನೆಯಲ್ಲಿ ಶನಿವಾರ ಕಳ್ಳತನ ನಡೆದಿದ್ದು, ಕಳ್ಳರು ಸುಮಾರು 9 ತೊಲೆ ಬಂಗಾರ, ₹5 ಸಾವಿರ ನಗದು ಕದ್ದಿದ್ದಾರೆ.
ಕುಟುಂಬ ಸದಸ್ಯರು ಗ್ರಾಮದಲ್ಲಿ ನಡೆಯುತ್ತಿರುವ ಜಪಯಜ್ಞ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾಗ ಈ ಕಳ್ಳತನ ನಡೆದಿದೆ.
ಪಿಎಸ್ಐ ನಂದಕುಮಾರ ಮೂಳೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.