
ಹುಲಸೂರ: ತಾಲ್ಲೂಕಿನ ಗೋರಟಾ (ಬಿ) ಹಾಗೂ ಕಾದೇಪುರ ಗ್ರಾಮದಲ್ಲಿ ಜಲ ಜೀವನ ಮಿಷನ್ ಯೋಜನೆಯಡಿ ಮನೆ ಮನೆಗೆ ನೀರು ಒದಗಿಸುವ ಕಾರ್ಯಕ್ರಮಕ್ಕೆ ಶಾಸಕ ಶರಣು ಸಲಗರ ಗುದ್ದಲಿ ಪೂಜೆ ನೆರವೇರಿಸಿದರು.
ಈ ವೇಳೆ ಶಾಸಕ ಶರಣು ಸಲಗರ ಮಾತನಾಡಿ, 2022-23ನೇ ಸಾಲಿನಲ್ಲಿ ಜೆಜೆಎಂ ಯೋಜನಯಡಿ ಗೋರಟಾ ಗ್ರಾಮದಲ್ಲಿ ₹ 1 ಕೋಟಿ 79 ಲಕ್ಷ ಹಾಗೂ ಕಾದೇಪುರ ಗ್ರಾಮದಲ್ಲಿ ₹ 1 ಕೋಟಿ 78 ಲಕ್ಷ ವೆಚ್ಚದಲ್ಲಿ ಕಾಮಗಾರಿ ನಡೆಸಲು ಅನುಮೋದನೆ ದೊರೆತಿದೆ. ಗೋರಟಾದ 835, ಕಾದೇಪುರ ಗ್ರಾಮದ 365 ಮನೆಗಳಿಗೆ ನಳಗಳ ಜೋಡಣೆ ಕಾಮಗಾರಿಗಳಿಗೂ ಕೆಲಸ ವೇಗವಾಗಿ ನಡೆಯುತ್ತಿದೆ. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಶ್ರಮಿಸಲಾಗುವುದು’ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ ಸಹಾಯಕ ನಿರ್ದೇಶಕ ಮಹದೇವ ಜಮ್ಮು, ಮುಚಳಂಬ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂದೀಪ ಬಿರಾದಾರ, ಗೋರಟಾ ಪಿಡಿಒ ಸಿದ್ದಲಿಂಗ ಸೇರಿ ಗ್ರಾ.ಪಂ. ಅಧ್ಯಕ್ಷರು, ಸದಸ್ಯರು ಸೇರಿ ಹಲವರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.