ADVERTISEMENT

ಕಲ್ಯಾಣ ಪರ್ವ: ಭಕ್ತರ ಮನೆಗೆ ಮಾತಾಜಿ ಭೇಟಿ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2021, 12:18 IST
Last Updated 1 ಅಕ್ಟೋಬರ್ 2021, 12:18 IST
ಬೀದರ್‌ನ ತಮ್ಮ ನಿವಾಸಕ್ಕೆ ಭೇಟಿ ನೀಡಿದ ಕೂಡಲಸಂಗಮ ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಅವರಿಗೆ ರಮೇಶ ಪಾಟೀಲ ಚಿಕ್ಕಪೇಟೆ ದಂಪತಿ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು
ಬೀದರ್‌ನ ತಮ್ಮ ನಿವಾಸಕ್ಕೆ ಭೇಟಿ ನೀಡಿದ ಕೂಡಲಸಂಗಮ ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಅವರಿಗೆ ರಮೇಶ ಪಾಟೀಲ ಚಿಕ್ಕಪೇಟೆ ದಂಪತಿ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು   

ಬೀದರ್: ಕಲ್ಯಾಣ ಪರ್ವ ಪ್ರಚಾರಾರ್ಥವಾಗಿ ಕೂಡಲಸಂಗಮ ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಅವರು ನಗರದಲ್ಲಿ ಭಕ್ತರ ಮನೆಗಳಿಗೆ ಭೇಟಿ ನೀಡಿದರು.

ಅ. 18 ರಿಂದ ಮೂರು ದಿನಗಳ ಕಾಲ ಬಸವಕಲ್ಯಾಣದಲ್ಲಿ ನಡೆಯಲಿರುವ ಕಲ್ಯಾಣ ಪರ್ವ ಕಾರ್ಯಕ್ರಮದಲ್ಲಿ ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಮನವಿ ಮಾಡಿದರು.

ನಗರದ ರಮೇಶ ಪಾಟೀಲ ಚಿಕ್ಕಪೇಟೆ ಅವರ ನಿವಾಸದಲ್ಲಿ ಕುಟುಂಬದ ಸದಸ್ಯರು ಮಾತಾಜಿ ಅವರಿಗೆ ಪುಷ್ಪಗುಚ್ಛ ನೀಡಿ ಸ್ವಾಗತಿಸಿ ಬರಮಾಡಿಕೊಂಡರು. ಪಾದಪೂಜೆ ಮಾಡಿ ಭಕ್ತಿ ಸಮರ್ಪಿಸಿದರು.

ADVERTISEMENT

ಜ್ಯೋತಿ ಆರ್. ಪಾಟೀಲ, ರಾಷ್ಟ್ರೀಯ ಬಸವ ದಳದ ಬೀದರ್ ದಕ್ಷಿಣ ಘಟಕದ ಉಸ್ತುವಾರಿ ಮಹಾಲಿಂಗ ಸ್ವಾಮಿ ಚಟ್ನಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.