ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ರೈತರನ್ನು ಭೇಟಿಯಾಗಿ ಸಾಂತ್ವನ ಹೇಳಿದರು
ಬೀದರ್: ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮಂಗಳವಾರ ಬೀದರ್ ಜಿಲ್ಲಾ ಪ್ರವಾಸ ಕೈಗೊಂಡು, ಜಿಲ್ಲೆಯಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದರು.
ರೈತರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಸರ್ಕಾರ ಕೈಗೊಂಡಿರುವ ನೆರೆ ಪರಿಹಾರ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಿ, ಮಾಹಿತಿ ಪಡೆದರು.
ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ಮರಕಲ್, ಅಲಿಯಂಬರ್, ಇಸ್ಲಾಂಪೂರ, ಜಾಂಪಾಡ್ ಗ್ರಾಮಗಳ ರೈತರ ಜಮೀನುಗಳಿಗೆ ಭೇಟಿ ನೀಡಿದರು.
ಮರಕಲ್ ಹಾಗೂ ಇತರೆ ಗ್ರಾಮಗಳಲ್ಲಿ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಿಖಿಲ್ ಕುಮಾರಸ್ವಾಮಿರವರು, ಮನೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಸಂತ್ರಸ್ತರಿಗೆ ಪಕ್ಷದಿಂದ ಧನ ಸಹಾಯ ಮಾಡಿದರು.
ಈ ವೇಳೆ ಮಾತನಾಡಿದ ಅವರು, ನಾನು ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ಮತ್ತು ಬೀದರ್ ಜಿಲ್ಲೆಯ ಪ್ರವಾಸ ಮಾಡ್ತಿದ್ದೇನೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೈತರು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಸಾಕಷ್ಟು ಜನರು ಮನೆ ಕಳೆದುಕೊಂಡು ಸಮಸ್ಯೆಗೆ ಸಿಲುಕಿದ್ದಾರೆ.
ರಾಜ್ಯ ಸರ್ಕಾರ ಕೂಡಲೇ ಬೆಳೆ ಕಳೆದುಕೊಂಡ ರೈತರ ಮತ್ತು ಮನೆ ಸಂತ್ರಸ್ತರ ನೆರವಿಗೆ ಧಾವಿಸಬೇಕು. ಮಳೆಯಿಂದಾಗಿ ಉಂಟಾಗಿರುವ ಹಾನಿಯ ಬಗ್ಗೆ ನಾನು ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿ ಕೇಂದ್ರದಿಂದಲೂ ಪರಿಹಾರ ನೀಡುವಂತೆ ಮನವಿ ಮಾಡುತ್ತೇನೆ ಎಂದರು.
ಜೆಡಿಎಸ್ ಪಕ್ಷದ ಮುಖಂಡ ಬಂಡೆಪ್ಪ ಕಾಶೆಂಪುರ್, ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಪಾಟೀಲ್ ಸೋಲಪೂರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ನಾಟೇಕರ್, ಪ್ರಮುಖರಾದ ಸೂರ್ಯಕಾಂತ್ ನಾಗಮಾರಪಳ್ಳಿ, ಐಲಿನ್ ಜಾನ್ ಮಠಪತಿ, ಅಶೋಕ್ ಕೊಡಗೆ, ಶಾಂತಲಿಂಗ ಸಾಳಗಿ, ರಾಜಶೇಖರ ಜವಳೆ, ದೇವೇಂದ್ರ ಸೋನಿ, ಲಲಿತಾ ಕರಂಜೆ, ಶಿವಪುತ್ರ ಮಾಳಗೆ, ಬಸವರಾಜ್ ಪಾಟೀಲ್ ಹಾರೂರಗೇರಿ, ರಾಜು ಚಿಂತಾಮಣಿ, ಸುದರ್ಶನ್ ಸುಂದರರಾಜ್, ಅಭಿ ಕಾಳೆ, ಬೊಮಗೊಂಡ ಚಿಟ್ಟಾವಾಡಿ, ರೇವಣಸಿದ್ದಪ್ಪ ಪಾಟೀಲ್, ಬಸವರಾಜ್ ಶಹಾಪೂರೆ, ಮಲ್ಲಿಕಾರ್ಜುನ ನೇಳಗೆ, ಪ್ರಶಾಂತ್ ವಿಶ್ವಕರ್ಮ, ಸಂಗು ಚಿದ್ರಿ, ಜಾಪೇಡ್ ಕಡ್ಯಾಳ, ತಾನಾಜಿ ತೋರಣೇಕರ್, ಮನೋಹರ್ ದಂಡೆ, ಅರುಣಕುಮಾರ್, ತರುಣ್ ನಾಗಮಾರಪಳ್ಳಿ ಸೇರಿದಂತೆ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.