ಹುಮನಾಬಾದ್: ‘ಕಾಂಗ್ರೆಸ್ ಅಧ್ಯಕ್ಷರಾದ ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಥಮ ಬಾರಿಗೆ ಡಿಸೆಂಬರ್ 10ರಂದು ಕಲಬುರಗಿ ನಗರಕ್ಕೆ ಆಗಮಿಸುತ್ತಿದ್ದಾರೆ. ಅಂದು ಕಲಬುರಗಿಯಲ್ಲಿ ಬೃಹತ್ ಸಮಾವೇಶ ಮಾಡಲಾಗುತ್ತಿದೆ’ ಎಂದು ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ ತಿಳಿಸಿದರು.
ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ನಡೆದ ಮಲ್ಲಿಕಾರ್ಜುನ ಖರ್ಗೆ ಅಭಿನಂದನಾ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಎಲ್ಲ ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಬೇಕು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ, ಪುರಸಭೆ ಅಧ್ಯಕ್ಷೆ ನೀತು ಶರ್ಮಾ, ಟಿಎಪಿಸಿಎಂಎಸ್ ಅಧ್ಯಕ್ಷ ಅಭಿಷೇಕ್ ಪಾಟೀಲ, ಜಿ.ಪಂ. ಮಾಜಿ ಅಧ್ಯಕ್ಷೆ ಗೀತಾ ಚಿದ್ರಿ, ಸುಗಂಧ ಅಣೆಪ್ಪ, ತಾ.ಪಂ ಮಾಜಿ ಅಧ್ಯಕ್ಷ ಶಿವರಾಜ ಗಂಗಶಟ್ಟಿ, ಉಮೇಶ ಜಮಗಿ, ಅಫ್ಸರ್ಮಿಯ್ಯಾ, ರಂಜೀತ್ ಮಾನಕರೆ, ಜ್ಞಾನೇಶ್ವರ ಭೋಸ್ಲೆ, ರವಿ ಪೂಜಾರಿ ದುಬಲಗುಂಡಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.