ADVERTISEMENT

ವಿಶ್ವ ಶಾಂತಿಗಾಗಿ ಕಾರ್ತೀಕ ದೀಪೋತ್ಸವ 13ಕ್ಕೆ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2020, 12:46 IST
Last Updated 9 ಡಿಸೆಂಬರ್ 2020, 12:46 IST

ಬೀದರ್‌: ವಿಶ್ವಶಾಂತಿ ಹಾಗೂ ಲೋಕ ಕಲ್ಯಾಣಕ್ಕಾಗಿ ಭಾಲ್ಕಿ ರಸ್ತೆಯ ಸಮೀಪದಲ್ಲಿರುವ ಜ್ಞಾನ ಶಿವಯೋಗಾಶ್ರಮದಲ್ಲಿ ಕಾರ್ತೀಕ ದೀಪೋತ್ಸವ ಡಿ.13ರಂದು ಸಂಜೆ 4 ಗಂಟೆಗೆ ನಡೆಯಲಿದೆ.

ಶ್ರೀಶೈಲದ ಅಕ್ಕಮಹಾದೇವಿ ಚೈತನ್ಯ ಪೀಠದ ಅಧಿಪತಿ ಕರುಣಾದೇವಿ ಮಾತಾ ಸಾನಿಧ್ಯ ವಹಿಸುವರು. ಬೇಮಳಖೇಡ ಹಿರೇಮಠದ ರಾಜಶೇಖರ ಶಿವಾಚಾರ್ಯರು ನೇತೃತ್ವ ವಹಿಸುವರು.

ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಕೋವಿಡ್‌ ನಿಯಮಗಳನ್ನು ಪಾಲಿಸಿ ಸುಖ, ಶಾಂತಿ, ಸಮೃದ್ಧಿಗಾಗಿ ಹಣತೆಗಳನ್ನು ತಂದು ಕಾರ್ತೀಕ ದೀಪಗಳನ್ನು ಬೆಳಗಿಸಿ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಕಾಶೀನಾಥ ಶಂಭು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.