ಬೀದರ್: ನೂತನ ಸಚಿವರಾದ ಭಗವಂತ ಖೂಬಾ ಹಾಗೂ ಶೋಭಾ ಕರಂದ್ಲಾಜೆ ಅವರನ್ನು ಜಿಲ್ಲೆಯ ಬಿಜೆಪಿ ಮುಖಂಡರು ನವದೆಹಲಿಯಲ್ಲಿ ಸನ್ಮಾನಿಸಿದರು.
ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ ಶಾಲು ಹೊದಿಸಿ, ಪುಷ್ಪ ಗುಚ್ಛ ನೀಡಿ ಶುಭ ಕೋರಿದರು.
ಬೀದರ್ನ ಕ್ರಿಯಾಶೀಲ ಸಂಸದ ಭಗವಂತ ಖೂಬಾ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಪ್ರಧಾನಿ ಮೋದಿ ಅವರು ಗಡಿ ಜಿಲ್ಲೆಗೆ ಪ್ರಾತಿನಿಧ್ಯ ಕೊಟ್ಟಿದ್ದಾರೆ. ಖೂಬಾ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಬೀದರ್ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕ ಅಭ್ಯುದಯಕ್ಕೆ ನಾಂದಿ ಹಾಡಲಿದ್ದಾರೆ ಎಂದು ಹೇಳಿದರು.
ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಜಗದೀಶ್ಚಂದ್ರ ಸ್ವಾಮಿ, ಶಿವಕುಮಾರ ವಟಗೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.