ಜನವಾಡ: ಬೀದರ್ ತಾಲ್ಲೂಕಿನ ಅತಿವಾಳ ಕ್ರಾಸ್ ಸಮೀಪದ ಬೀದರ್-ಭಾಲ್ಕಿ ಮುಖ್ಯ ರಸ್ತೆಯ ಬದಿಯಲ್ಲಿ ವೃದ್ಧ ಮಹಿಳೆಯೊಬ್ಬರನ್ನು ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಲಾಗಿದೆ.
ಸದ್ಯ ಬೀದರ್ನ ಶೆಟಕಾರ್ ಗಲ್ಲಿಯಲ್ಲಿ ವಾಸವಾಗಿದ್ದ ಹೊನ್ನಿಕೇರಿ ಗಾಮದ ಕಮಲಾಬಾಯಿ ಮಲಶೆಟ್ಟಿ ಶೆಟಕಾರ್(70) ಕೊಲೆಯಾದವರು.
ಕಮಲಾಬಾಯಿ ಅವರು ತನ್ನ ಜಮೀನಿನ ಸರ್ವೇ ಮಾಡಿಸಿಕೊಳ್ಳಲು ಬಂದಿದ್ದ ವೇಳೆ ಘಟನೆ ನಡೆದಿದೆ. ಅವರ ಸಂಬಂಧಿಕರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಬ್ಯಾಕೋಡ್, ಡಿವೈಎಸ್ಪಿ ಬಸವೇಶ್ವರ ಹೀರಾ, ಬೀದರ್ ಗ್ರಾಮೀಣ ಸಿಪಿಐ ಶ್ರೀಕಾಂತ ಅಲ್ಲಾಪುರ, ಜನವಾಡ ಪಿಎಸ್ಐ ಶಿವರಾಜ ಪಾಟೀಲ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.