ಬೀದರ್: ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಚಿಟ್ಟಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸಂಗಾರೆಡ್ಡಿ ಎಂಬುವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ. ಆದೇಶ ಹೊರಡಿಸಿದ್ದಾರೆ.
ಕೃಷಿ ಭೂಮಿಯನ್ನು ಸಕ್ಷಮ ಪ್ರಾಧಿಕಾರದಿಂದ ಭೂ ಪರಿವರ್ತನೆ ಮಾಡದೇ ಇರುವುದು ಮತ್ತು ಲೇಔಟ್ ಅನುಮೋದನೆ ಪಡೆಯದೆ ಡಿಜಿಟಲ್ ಖಾತಾ ವಿತರಣೆ ಮಾಡಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.