ಬೀದರ್: ಇಲ್ಲಿಯ ಉದ್ಯಮಿ ಮಡಿವಾಳಪ್ಪ ಗಂಗಶೆಟ್ಟಿ ಅವರು ಕಲಬುರ್ಗಿಯ ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕಲಬುರ್ಗಿಯಲ್ಲಿ ನಡೆದ ಸಂಸ್ಥೆಯ ಆಡಳಿತ ಮಂಡಳಿ ಸಭೆಯಲ್ಲಿ ಅವರನ್ನು ಆಯ್ಕೆ ಮಾಡಲಾಗಿದೆ.
ಮಡಿವಾಳಪ್ಪ ಅವರು ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಟ್ರಸ್ಟಿ, ಚಿದಂಬರ ಶಿಕ್ಷಣ ಸಂಸ್ಥೆ, ಗಾಂಧಿಗಂಜ್ ಸಹಕಾರ ಬ್ಯಾಂಕ್ ನಿರ್ದೇಶಕ, ಲಿಂಗಾಯತ ಸಮಾಜ ಅಭಿವೃದ್ಧಿ ಸಂಘದ ಆಡಳಿತ ಮಂಡಳಿ ಸದಸ್ಯ ಹಾಗೂ ಬೀದರ್ ತಾಲ್ಲೂಕು ಆಗ್ರೋ ಇನ್ಪುಟ್ ಡೀಲರ್ಸ್ ಅಸೋಸಿಯೇಶನ್ ಅಧ್ಯಕ್ಷರಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.