ಬಸವಕಲ್ಯಾಣ: ತಾಲ್ಲೂಕಿನ ಗಡಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟದಿಂದಾಗಿ ಬಿಗುವಿನ ವಾತಾವರಣ ಇರುವುದರಿಂದ ನಗರದಿಂದ ಅಲ್ಲಿನ ಸ್ಥಳಗಳಿಗೆ ಪ್ರಯಾಣಿಸುವ ಬಸ್ಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಗಡಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ತುರೂರಿ ಸಮೀಪ ಸೋಮವಾರ ಕರ್ನಾಟಕದ ಬಸ್ಗೆ ಬೆಂಕಿ ಹಚ್ಚಿದ್ದರಿಂದ ಬಸ್ ಸಂಚಾರ ನಿಲ್ಲಿಸಲಾಗಿದೆ. ಮೇಲಾಧಿಕಾರಿಗಳ ಮುಂದಿನ ಆದೇಶದವರೆಗೆ ಬಸ್ ಸಂಚಾರ ಇರುವುದಿಲ್ಲ. ತುಳಜಾಪುರ ಹಾಗೂ ಇತರೆಡೆಯೂ ಹೋಗುವ ಬಸ್ ಗಳು ಹೋಗುವುದಿಲ್ಲ ಎಂದು ಬಸ್ ಘಟಕ ವ್ಯವಸ್ಥಾಪಕರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.