ಚಿಟಗುಪ್ಪ: ಸಮೀಪದ ಬಗದಲ್ ತಾಂಡಾದ ನಿವಾಸಿ ಜ್ಯೋತಿ ಅಂಬಾದಾಸ್ ಅವರು ಆಂಬುಲೆನ್ಸ್ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಹೆರಿಗೆ ನೋವಿನಿಂದ ಬಳಲುತ್ತಿದ್ದ ಜ್ಯೋತಿ ಅವರನ್ನು ಬುಧವಾರ ತಾಲ್ಲೂಕಿನ ಮನ್ನಾಎಖ್ಖೇಳಿ ಸಮುದಾಯ ಆರೋಗ್ಯ ಕೇಂದ್ರದ 108 ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಮಾರ್ಗ ಮಧ್ಯೆ ಜ್ಯೋತಿ ಅವರಿಗೆ ವಿಪರೀತ ನೋವು ಕಾಣಿಸಿಕೊಂಡಿದೆ. ತಕ್ಷಣ ಕಾರ್ಯ ಪ್ರವೃತ್ತರಾದ ಆಂಬುಲೆನ್ಸ್ ಸಿಬ್ಬಂದಿ ಮಡೆಪ್ಪ, ಇಎಂಟಿ ವಿದ್ಯಾಸಾಗರ ಅವರು ಆಂಬುಲೆನ್ಸ್ನ ಒಳಗಡೆಯೇ ಸುರಕ್ಷಿತವಾಗಿ ಹೆರಿಗೆ ಮಾಡಿಸಿದರು.
ನಂತರ ಬಗದಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಸಾರ್ವ ಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ತಾಯಿ–ಮಗು ಆರೋಗ್ಯವಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.