ADVERTISEMENT

ಬೀದರ್: ‘ಕ್ವಿಟ್‌ ಇಂಡಿಯಾ’ಗೆ 79 ವರ್ಷ, ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆ ಸ್ಮರಣೆ

ಜಿಲ್ಲೆಯ ವಿವಿಧೆಡೆ ಭಾವಚಿತ್ರಕ್ಕೆ ಪೂಜೆ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2020, 16:26 IST
Last Updated 9 ಆಗಸ್ಟ್ 2020, 16:26 IST
ಬೀದರ್‌ನ ಕಾಂಗ್ರೆಸ್‌ ಕಚೇರಿಯಲ್ಲಿ ಕ್ವಿಟ್‌ ಇಂಡಿಯಾ ಚಳವಳಿಯ ನೆನಪಿಗಾಗಿ ಕಾರ್ಯಕ್ರಮ ಆಯೋಜಿಸಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು (ಎಡಚಿತ್ರ) ಭಾಲ್ಕಿಯ ಮಹಾತ್ಮ ಗಾಂಧಿ ವೃತ್ತದಲ್ಲಿ ಭಾರತ ಬಿಟ್ಟು ತೊಲಗಿ ವರ್ಷಾಚರಣೆಗೆ ಓಂಪ್ರಕಾಶ ರೊಟ್ಟೆ ಚಾಲನೆ ನೀಡಿದರು
ಬೀದರ್‌ನ ಕಾಂಗ್ರೆಸ್‌ ಕಚೇರಿಯಲ್ಲಿ ಕ್ವಿಟ್‌ ಇಂಡಿಯಾ ಚಳವಳಿಯ ನೆನಪಿಗಾಗಿ ಕಾರ್ಯಕ್ರಮ ಆಯೋಜಿಸಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು (ಎಡಚಿತ್ರ) ಭಾಲ್ಕಿಯ ಮಹಾತ್ಮ ಗಾಂಧಿ ವೃತ್ತದಲ್ಲಿ ಭಾರತ ಬಿಟ್ಟು ತೊಲಗಿ ವರ್ಷಾಚರಣೆಗೆ ಓಂಪ್ರಕಾಶ ರೊಟ್ಟೆ ಚಾಲನೆ ನೀಡಿದರು   

ಬೀದರ್: ‘ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ ಚಳವಳಿ ನಡೆದು 79 ವರ್ಷಗಳಾದ ಪ್ರಯುಕ್ತ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪಕ್ಷದ ಕಚೇರಿಯಲ್ಲಿ ಭಾನುವಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಪಕ್ಷದ ಮುಖಂಡರು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

‘1942ರಲ್ಲಿ ನಡೆದ ಕಾಂಗ್ರೆಸ್ ಆಧಿವೇಶನದಲ್ಲಿ ನಿರ್ಣಯ ಕೈಗೊಂಡು ಮುಂಬೈನಲ್ಲಿ ಬೃಹತ್‌ ಪ್ರತಿಭಟನೆ ಮಾಡಲಾಗಿತ್ತು. ಅಂದು ಹಿಂದೂ ಮಹಾಸಭಾದ ಸಾವರಕರ್‌ ಸೇರಿದಂತೆ ಕೆಲ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು’ ಎಂದು ಕಾಂಗ್ರೆಸ್‌ ಮುಖಂಡ ಶಂಕರ ದೊಡ್ಡಿ ಹೇಳಿದರು.

ADVERTISEMENT

ಕಾಂಗ್ರೆಸ್ ಹಿಂದುಳಿದ ವಿಭಾಗದ ಅಧ್ಯಕ್ಷ ಶಂಕರ ರೆಡ್ಡಿ, ಪರಿಶಿಷ್ಟ ವಿಭಾಗದ ಡಿ.ಕೆ.ಸಂಜು, ಜಿಲ್ಲಾ ಕಾರ್ಯದರ್ಶಿ ಜಾರ್ಜ್, ಬುಡಾ ಮಾಜಿ ಅಧ್ಯಕ್ಷ ಸಂಜಯ್ ಜಾಗೀರದಾರ್, ಗೋವರ್ಧನ ರಾಥೋಡ್, ಮೋಹನ ಡಾಂಗೆ ಮತ್ತು ಗೌತಮ ಕಂದಗೂಳ ಇದ್ದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆನಂದ ದೇವಪ್ಪ ಸ್ವಾಗತಿಸಿ ವಂದಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.