ADVERTISEMENT

ತಾಂಡಾಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಪ್ರಚಾರ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2021, 6:27 IST
Last Updated 12 ಏಪ್ರಿಲ್ 2021, 6:27 IST
ಬಸವಕಲ್ಯಾಣ ತಾಲ್ಲೂಕಿನ ತಾಂಡಾವೊಂದರಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಸಚಿವ ಪ್ರಭು ಚವಾಣ್‌ ಮನವಿ ಮಾಡಿದರು
ಬಸವಕಲ್ಯಾಣ ತಾಲ್ಲೂಕಿನ ತಾಂಡಾವೊಂದರಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಸಚಿವ ಪ್ರಭು ಚವಾಣ್‌ ಮನವಿ ಮಾಡಿದರು   

ಬೀದರ್‌: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಯುಕ್ತ ಬಸವಕಲ್ಯಾಣ ತಾಲ್ಲೂಕಿನ ತಾಂಡಾಗಳಲ್ಲಿ ಸಂಚರಿಸಿದಸಚಿವ ಪ್ರಭು ಚವಾಣ್‌ ಅವರು ಬಿಜೆಪಿ ಅಭ್ಯರ್ಥಿ ಶರಣು ಸಲಗರ ಪರವಾಗಿ ಮತಯಾಚಿಸಿದರು.

ಹಾಲಹಿಪ್ಪರಗಾ ತಾಂಡಾ, ಹತ್ಯಾಳ ಎ, ಹತ್ಯಾಳ ಬಿ ತಾಂಡಾ ಹಾಗೂ ಹಾರಕೂಡ ತಾಂಡಾಗಳಲ್ಲಿ ಸಂಚರಿಸಿ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಕರಪತ್ರಗಳನ್ನು ಮತದಾರರಿಗೆ ಕೊಟ್ಟು ಮತಯಾಚನೆ ಮಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಅಣ್ಣಾರಾವ್ ರಾಠೋಡ್, ಮುಖಂಡರಾದ ದಿಲೀಪ ರಾಠೋಡ್, ಜಗನ್ನಾಥ ಆಡೆ, ಅನಿಲ ಚವಾಣ್, ಸುನೀಲ ರಾಠೋಡ್, ಅಮರ್ ಬಡದಾಳೆ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.