ADVERTISEMENT

ಮಡಿಕೇರಿ: ‘ಯೋಜನೆಗಳ ಸದ್ಬಳಕೆಯಿಂದ ಪ್ರಗತಿ’: ಶಾಸಕ ಬಂಡೆಪ್ಪ ಕಾಶೆಂಪೂರ

​ಪ್ರಜಾವಾಣಿ ವಾರ್ತೆ
Published 15 ಜುಲೈ 2020, 13:26 IST
Last Updated 15 ಜುಲೈ 2020, 13:26 IST
ಚಿಟಗುಪ್ಪ ತಾಲ್ಲೂಕಿನ ಮನ್ನಾಎಖ್ಖೇಳಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಶಾಸಕ ಬಂಡೆಪ್ಪ ಕಾಶೆಂಪೂರ ಜನೌಷಧಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು
ಚಿಟಗುಪ್ಪ ತಾಲ್ಲೂಕಿನ ಮನ್ನಾಎಖ್ಖೇಳಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಶಾಸಕ ಬಂಡೆಪ್ಪ ಕಾಶೆಂಪೂರ ಜನೌಷಧಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು   

ಚಿಟಗುಪ್ಪ: ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳು ಸಮರ್ಪಕವಾಗಿ ಸದ್ಬಳಕೆ ಆದಾಗ ಮಾತ್ರ ಸಮಾಜದ ಪ್ರಗತಿ ಸಾಧ್ಯ’ ಎಂದು ಶಾಸಕ ಬಂಡೆಪ್ಪ ಕಾಶೆಂಪೂರ ಹೇಳಿದರು.

ತಾಲ್ಲೂಕಿನ ಮನ್ನಾಎಖ್ಖೇಳಿ ಗ್ರಾಮದಲ್ಲಿ ಜನೌಷಧಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.

‘ಕ್ಷೇತ್ರದ ನಿರ್ಣಾ, ಬಗದಲ್, ಕಮಠಾಣ, ಮನ್ನಳ್ಳಿ ಗ್ರಾಮಗಳಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆಂಬುಲೆನ್ಸ್‌ ಸೌಲಭ್ಯ ಒದಗಿಸಲಾಗಿದೆ. ಮನ್ನಾಎಖ್ಖೇಳಿ ಕೇಂದ್ರದಲ್ಲಿ ಕಣ್ಣಿನ ಪರೀಕ್ಷಾ ಸೌಲಭ್ಯ ಕಲ್ಪಿಸಲಾಗಿದೆ. ಸರ್ಕಾರ ಯಾವುದೇ ಇರಲಿ ಜನಪ್ರತಿನಿಧಿಗಳ ಹಿತಾಸಕ್ತಿ ಇದ್ದಲ್ಲಿ ಮಾತ್ರ ಪ್ರಗತಿ ಕಾಣಲು ಸಾಧ್ಯ’ ಎಂದು ತಿಳಿಸಿದರು.

ADVERTISEMENT

ಜೆಡಿಎಸ್ ಮುಖಂಡ ಸಂತೋಷ ರಾಸೂರ್. ಪಾಂಡಪ್ಪ ನಿಡವಂಚಿ, ಮಲ್ಲಪ್ಪ ಗಣಗೊಂಡ್, ಅಮರ್, ಝರಣಪ್ಪ ಬೋರಾಳ, ಇತಾಯತ ಅಲಿ ಹವಾಲ್ದಾರ್ ಹಾಗೂ ಖೈರೋದ್ದಿನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.