ADVERTISEMENT

ಬೀದರ್: ಕೆರೆ-ಸೇತುವೆ ದುರಸ್ತಿ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2026, 7:26 IST
Last Updated 23 ಫೆಬ್ರುವರಿ 2026, 7:26 IST
ಔರಾದ್ ತಾಲ್ಲೂಕಿನ ಯನಗುಂದಾ ಸೇತುವೆಗೆ ಶಾಸಕ ಪ್ರಭು ಚವಾಣ್ ಭೇಟಿ ನೀಡಿ ರಿಪೇರಿ ಕಾಮಗಾರಿಗೆ ಚಾಲನೆ ನೀಡಿದರು
ಔರಾದ್ ತಾಲ್ಲೂಕಿನ ಯನಗುಂದಾ ಸೇತುವೆಗೆ ಶಾಸಕ ಪ್ರಭು ಚವಾಣ್ ಭೇಟಿ ನೀಡಿ ರಿಪೇರಿ ಕಾಮಗಾರಿಗೆ ಚಾಲನೆ ನೀಡಿದರು   

ಔರಾದ್: ಪ್ರಸಕ್ತ ವರ್ಷ ಮಳೆಗಾಲದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಯಾದ ಕೆರೆ ಹಾಗೂ ಸೇತುವೆ ದುರಸ್ತಿ ಕಾಮಗಾರಿಗೆ ಶಾಸಕ ಪ್ರಭು ಚವಾಣ್ ಭಾನುವಾರ ಚಾಲನೆ ನೀಡಿದರು.

‘ಭಾರಿ ಮಳೆಯಿಂದ ಯನಗುಂದಾ ಸೇತುವೆ ಕುಸಿದು ಈ ಭಾಗದ ಸಂಪರ್ಕ ಕಡಿತಗೊಂಡು ಜನ ತೀವ್ರ ತೊಂದರೆ ಎದುರಿಸುತ್ತಿದ್ದರು. ಬೋಂತಿ ಕೆರೆ ಒಡೆದು ಹೊಲಗಳಿಗೆ ನೀರು ನುಗ್ಗಿ ರೈತರು ಹಾನಿ ಅನುಭವಿಸಿರುವ ಹಿನ್ನೆಲೆಯಲ್ಲಿ ಸರ್ಕಾರದ ಮೇಲೆ ಒತ್ತಡ ಹೇರಿ ₹ 3 ಕೋಟಿ ಅನುದಾನ ಮಂಜೂರು ಮಾಡಿಸಲಾಗಿದೆ’ ಎಂದು ಶಾಸಕರು ತಿಳಿಸಿದರು.

‘ಸೇತುವೆ ಹಾಗೂ ಕೆರೆ ಕಾಮಗಾರಿ ಸೂಕ್ಷ್ಮವಾಗಿರುವುದರಿಂದ ಗುಣಮಟ್ಟ ಕಾಯ್ದುಕೊಳ್ಳಬೇಕು. ಅಧಿಕಾರಿಗಳು ಮೇಲ್ವಿಚಾರಣೆ ಮಾಡಬೇಕು. ಕಳಪೆ ಆದರೆ ಜನರೇ ಕಾಮಗಾರಿ ತಡೆ ಹಿಡಿಯಬೇಕು’ ಎಂದು ಹೇಳಿದರು.

ADVERTISEMENT

ರಾಮಸಿಂಗ್ ನಾಯಕ್ ತಾಂಡಾ ಬಳಿಯ ₹ 1.5 ಕೋಟಿ ಕೆರೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ರಾಮಶೆಟ್ಟಿ ಪನ್ನಾಳೆ, ಧೊಂಡಿಬಾ ನರೋಟೆ, ಶಿವರಾಜ ಅಲ್ಮಾಜೆ, ಖಂಡೋಬಾ ಕಂಗಟೆ, ಪ್ರತೀಕ ಚವಾಣ್, ಶಿವಕುಮಾರ ಮಜಗೆ, ನಾಗನಾಥ ಲಕ್ಕಾ, ರಮೇಶ ಗೌಡ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.