ADVERTISEMENT

ಸಿ.ಎಂ ಯಡಿಯೂರಪ್ಪ ಕಾಲಿಗೆ ಬಿದ್ದ ಶಾಸಕ ಶರಣು ಸಲಗರ

​ಪ್ರಜಾವಾಣಿ ವಾರ್ತೆ
Published 8 ಜೂನ್ 2021, 13:15 IST
Last Updated 8 ಜೂನ್ 2021, 13:15 IST
ಬೆಂಗಳೂರಿನಲ್ಲಿ ಪ್ರಮಾಣವಚನ ಸ್ವೀಕರಿಸುವ ಮುಂಚೆ ಬಸವಕಲ್ಯಾಣ ಶಾಸಕ ಶರಣು ಸಲಗರ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ನಮಸ್ಕರಿಸಿದರು
ಬೆಂಗಳೂರಿನಲ್ಲಿ ಪ್ರಮಾಣವಚನ ಸ್ವೀಕರಿಸುವ ಮುಂಚೆ ಬಸವಕಲ್ಯಾಣ ಶಾಸಕ ಶರಣು ಸಲಗರ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ನಮಸ್ಕರಿಸಿದರು   

ಬೀದರ್‌: ಬಸವಕಲ್ಯಾಣ ಕ್ಷೇತ್ರದಿಂದ ವಿಧಾನಸಭೆಗೆ ಈಚೆಗೆ ಆಯ್ಕೆಯಾದ ಶರಣು ಸಲಗರ ಬೆಂಗಳೂರಲ್ಲಿ ಮಂಗಳವಾರ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು. ಇದಕ್ಕೂ ಮುಂಚೆ ಅವರು ಮುಖ್ಯಮಂತ್ರಿ ಕಾಲಿಗೆ ಬಿದ್ದು ನಮಸ್ಕರಿಸಿದರು.

ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಗೆದ್ದಿರುವ ಅವರು ಕುಟುಂಬ ಸಮೇತ ಬೆಂಗಳೂರಿಗೆ ತೆರಳಿ ಪ್ರಮಾಣವಚನ ಸ್ವೀಕರಿಸಿದರು. ಪಕ್ಷದ ಮುಖಂಡರನ್ನು ಭೇಟಿ ಮಾಡಿ ಸಹಕಾರ ಕೋರಿದರು.

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹಾಗೂ ಪ್ರಮುಖರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.