ಬೀದರ್: ಬರುವ ದಿನಗಳಲ್ಲಿ ಜಿಲ್ಲೆಯ ಎಲ್ಲ ನ್ಯಾಯ ಬೆಲೆ ಅಂಗಡಿಗಳಲ್ಲಿ ಸರ್ಕಾರದ ವತಿಯಿಂದ ಐಪಿಪಿಬಿ ಮೊಬೈಲ್ ಬ್ಯಾಂಕಿಂಗ್ ಅಪ್ಲಿಕೇಷನ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಬೀದರ್ ಉಪ ವಿಭಾಗಾಧಿಕಾರಿ ಲವೀಶ್ ಓರ್ಡಿಯಾ ಹೇಳಿದರು.
ತಾಲ್ಲೂಕಿನ ನಿಜಾಂಪುರ ಗ್ರಾಮದ ನ್ಯಾಯ ಬೆಲೆ ಅಂಗಡಿ ಸಂಖ್ಯೆ 45 ರಲ್ಲಿ ಐಪಿಪಿಬಿ ಮೊಬೈಲ್ ಬ್ಯಾಂಕಿಂಗ್ ಅಪ್ಲಿಕೇಷನ್ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಸಾರ್ವಜನಿಕರು ಮೊಬೈಲ್ ಬ್ಯಾಂಕಿಂಗ್ ಅಪ್ಲಿಕೇಷನ್ ಪ್ರಯೋಜನ ಪಡೆಯಬೇಕು ಎಂದರು.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕಿ ಸುರೇಖಾ, ಶಿರಸ್ತೆದಾರ ಅನಿಲಕುಮಾರ, ಆಹಾರ ನಿರೀಕ್ಷಕ ಅರುಣಕುಮಾರ, ಅಂಚೆ ಇಲಾಖೆ ಐಪಿಪಿಬಿ ವ್ಯವಸ್ಥಾಪಕ ಅಭಿಮನ್ಯು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.