ADVERTISEMENT

‘ಬೆಲೆ ಏರಿಕೆಯೇ ಮೋದಿ ಸರ್ಕಾರದ ಸಾಧನೆ’

​ಪ್ರಜಾವಾಣಿ ವಾರ್ತೆ
Published 8 ಜುಲೈ 2021, 3:19 IST
Last Updated 8 ಜುಲೈ 2021, 3:19 IST
ಔರಾದ್ ಪಟ್ಟಣದಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರು ಬೆಲೆ ಏರಿಕೆ ವಿರೋಧಿಸಿ ಸೈಕಲ್ ಜಾಥಾ ನಡೆಸಿದರು
ಔರಾದ್ ಪಟ್ಟಣದಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರು ಬೆಲೆ ಏರಿಕೆ ವಿರೋಧಿಸಿ ಸೈಕಲ್ ಜಾಥಾ ನಡೆಸಿದರು   

ಔರಾದ್: ಪೆಟ್ರೋಲಿಯಂ ಹಾಗೂ ಇತರೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಇಲ್ಲಿಯ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಸೈಕಲ್ ಜಾಥಾ ನಡೆಸಿದರು.

ಪಟ್ಟಣದ ಕನ್ನಡಾಂಬೆ ವೃತ್ತದಿಂದ ಬಸವೇಶ್ವರ ವೃತ್ತದ ವರೆಗೆ ಸೈಕಲ್ ಜಾಥಾ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಕಾಂಗ್ರೆಸ್ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಮೀನಾಕ್ಷಿ ಸಂಗ್ರಾಮ ಕೇಂದ್ರದ ಜನ ವಿರೋಧಿ ನೀತಿಗೆ ತರಾಟಗೆ ತೆಗೆದುಕೊಂಡರು. ‘70 ವರ್ಷದಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುವ ಮೋದಿ ಅವರು ಎರಡು ಅವಧಿಯಲ್ಲಿ ನೀವು ಏನು ಮಾಡಿದ್ದೀರಿ ಎಂದು ಉತ್ತರಿಸಬೇಕು. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೆ ಏರಿಸಿದ್ದು ಮೋದಿ ಸರ್ಕಾರದ ಬಹುದೊಡ್ಡ ಸಾಧನೆ’ ಎಂದು ಟೀಕಿಸಿದರು.

ADVERTISEMENT

ತಾಲ್ಲೂಕು ಕಾಂಗ್ರೆಸ್ ಉಸ್ತುವಾರಿ ಕನ್ನಿರಾಮ ರಾಠೋಡ, ‘ಕೇಂದ್ರ ಸರ್ಕಾರದ ನೀತಿ ಬಡವರು, ರೈತರಿಗೆ ತೀವ್ರ ಅನ್ಯಾಯ ಮಾಡಿದೆ. ಈ ಸರ್ಕಾರ ಕಿತ್ತೊಗೆಯಲು ಜನ ಬಯಸಿದ್ದಾರೆ’ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ ಹಲಬರ್ಗೆ, ‘ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡಿದೆ. ಸಮರ್ಪಕ ಬಿತ್ತನೆ ಬೀಜ ಒದಗಿಸಿಲ್ಲ. ಕಳೆದ ಸಾಲಿನ ಅತಿವೃಷ್ಟಿ ಹಾಗೂ ಬೆಳೆ ಹಾನಿ ಪರಿಹಾರ ಇಂದಿಗೂ ಬಂದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಆನಂದ ಚವಾಣ್, ಯುವ ಕಾಂಗ್ರೆಸ್‍ನ ದತ್ತಾತ್ರಿ ಬಾಪುರೆ, ಸುಧಾಕರ ಕೊಳ್ಳೂರ್, ಶರಣಪ್ಪ ಪಾಟೀಲ ಮಾತನಾಡಿದರು.

ಕಾಂಗ್ರೆಸ್ ತಾಲ್ಲೂಕು ವಕ್ತಾರ ಸಾಯಿಕುಮಾರ ಘೋಡ್ಕೆ, ಧುರೀಣ ಬಸವರಾಜ ದೇಶಮುಖ, ರಾಮಣ್ಣ ವಡೆಯರ್, ಡಾ.ಫಯಾಜ್‍ಅಲಿ, ನೆಹರು ಪಾಟೀಲ, ಸಂದೀಪ ಮಾನೆ, ರಾಜಕುಮಾರ ಮುದಾಳೆ, ಅನೀಲ ವಡೆಯರ್, ಗುಂಡುರಾವ, ಪ್ರವೀಣ ಕದಮ, ಬಾಲಾಜಿ ಕಾಸಲೆ, ಪ್ರಕಾಶ ಜಾಧವ್, ಸತೀಶಕುಮಾರ ಘೋಡ್ಕೆ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.