ಚಿಟಗುಪ್ಪ: ರಾಜ್ಯ ಸರ್ಕಾರ ಪಡಿತರ ಚೀಟಿದಾರ ಫಲಾನುಭವಿಗಳಿಗೆ 5 ಕೆ.ಜಿ ಆಹಾರ ಧಾನ್ಯಕ್ಕೆ ಪ್ರತಿ ಕೆ.ಜಿಗೆ ₹34 ರಂತೆ ಪಡಿತರ ಚೀಟಿ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಹಣ ಜಮಾ ಮಾಡಲು ಆದೇಶ ಹೊರಡಿಸಿದೆ.
ಫಲಾನುಭವಿಗಳ ಪಡಿತರ ಚೀಟಿಗೆ ಜೋಡಿಸಲಾದ ಆಧಾರ್ಕಾರ್ಡ್ ಯಾವ ಬ್ಯಾಂಕ್ ಖಾತೆಗೆ ಜೋಡಿಸಲಾಗಿರುತ್ತದೆಯೊ ಅದಕ್ಕೆ ಹಣ ಜಮಾ ಮಾಡಲಾಗುತ್ತದೆ ಎಂದು ತಹಶೀಲ್ದಾರ್ ರವೀಂದ್ರ ದಾಮಾ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.