ADVERTISEMENT

ಜಿಎನ್‌ಡಿ ಎಂಜಿನಿಯರಿಂಗ್ ಕಾಲೇಜ್‍ಗೆ ‘ಅತ್ಯಂತ ವಿಶ್ವಾಸಾರ್ಹ ಪ್ರಶಸ್ತಿ’ 

​ಪ್ರಜಾವಾಣಿ ವಾರ್ತೆ
Published 3 ಜುಲೈ 2022, 1:49 IST
Last Updated 3 ಜುಲೈ 2022, 1:49 IST
ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಬಲಬೀರ್ ಸಿಂಗ್ ಅವರು ಬೀದರ್‌ನ ಗುರುನಾನಕ ದೇವ್ ಎಂಜಿನಿಯರಿಂಗ್ ಕಾಲೇಜ್‍ಗೆ ದೊರೆತ ಅತ್ಯಂತ ವಿಶ್ವಾಸಾರ್ಹ ಪ್ರಶಸ್ತಿ ಸ್ವೀಕರಿಸಿದರು
ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಬಲಬೀರ್ ಸಿಂಗ್ ಅವರು ಬೀದರ್‌ನ ಗುರುನಾನಕ ದೇವ್ ಎಂಜಿನಿಯರಿಂಗ್ ಕಾಲೇಜ್‍ಗೆ ದೊರೆತ ಅತ್ಯಂತ ವಿಶ್ವಾಸಾರ್ಹ ಪ್ರಶಸ್ತಿ ಸ್ವೀಕರಿಸಿದರು   

ಬೀದರ್‌: ನಗರದ ಗುರುನಾನಕ ದೇವ್ ಎಂಜಿನಿಯರಿಂಗ್ ಕಾಲೇಜಿಗೆ ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಪ್ರಶಸ್ತಿ ಲಭಿಸಿದೆ.

ದೆಹಲಿಯಲ್ಲಿ ನಡೆದ ಗ್ಲೋಬಲ್ ಎಜುಕೇಶನ್ ಅಚೀವ್‍ಮೆಂಟ್ ಅವಾರ್ಡ್ ಸಮಾರಂಭದಲ್ಲಿ ಇಷಾ ದೇವುಲ್ ಅವರು ಕಾಲೇಜಿನ ಅಧ್ಯಕ್ಷ ಎಸ್. ಬಲಬೀರ್ ಸಿಂಗ್ ಮತ್ತು ಉಪಾಧ್ಯಕ್ಷೆ ರೇಷ್ಮಾ ಕೌರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ರೇಷ್ಮಾ ಕೌರ್ ಮಾತನಾಡಿ, ಗುರುನಾನಕ ದೇವ್ ಇಂಜಿನಿಯರಿಂಗ್ ಕಾಲೇಜು ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ 42 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದೆ. ಈ ಕಾಲೇಜಿನಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ADVERTISEMENT

ಬಿಜೆಪಿ ರಾಷ್ಟ್ರೀಯ ವಕ್ತಾರ ಶಾಹೇಜಾದ ಪೂನಾವಲ್ಲಾ, ಬಿಜೆಪಿ ಮುಖಂಡ ಮನೋಜ್ ತಿವಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.