ADVERTISEMENT

ನಾಗಯ್ಯ ಸ್ವಾಮಿ ಸ್ಮರಣೋತ್ಸವ ನಾಳೆ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2022, 13:23 IST
Last Updated 30 ನವೆಂಬರ್ 2022, 13:23 IST
ನಾಗಯ್ಯ ಸ್ವಾಮಿ
ನಾಗಯ್ಯ ಸ್ವಾಮಿ   

ಚಿಟಗುಪ್ಪ: ತಾಲ್ಲೂಕಿನ ನಿರ್ಣಾ ಗ್ರಾಮದ ನಾಗಯ್ಯ ವೀರಯ್ಯ ಮಠಪತಿ ಶಿಕ್ಷಣ ಸಂಸ್ಥೆ ವತಿಯಿಂದ ಡಿಸೆಂಬರ್ 2 ರಂದು ನಾಗಯ್ಯ ಸ್ವಾಮಿ ವೀರಯ್ಯ ಸ್ವಾಮಿ ಮಠಪತಿ ಅವರ 27ನೇ ಸ್ಮರಣೋತ್ಸವ ಕಾರ್ಯಕ್ರಮ ನಡೆಯಲಿದೆ.

ಸಂಜೆ 6ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗಣ್ಯರಿಗೆ ನಾಗಯ್ಯ ಸ್ವಾಮಿ ಸೇವಾ ರತ್ನ ಪ್ರಶಸ್ತಿ ಪ್ರದಾನ, ರಾತ್ರಿ ಸಂಗೀತ ಕಲಾವಿದರಿಂದ ಭಜನಾ ಸಂಗೀತ ಕಾರ್ಯಕ್ರಮ ನಡೆಯುತ್ತದೆ. ಮರುದಿನ ಬೆಳಿಗ್ಗೆ ಕಲಾವಿದರಿಗೆ ಸಂಸ್ಥೆಯಿಂದ ಸನ್ಮಾನ ಪತ್ರ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಗುತ್ತದೆ ಎಂದು ಸಂಸ್ಥೆಯ ಅಧ್ಯಕ್ಷೆ ಮಾತೆ ಸಂಗಮ್ಮ ಮಠಪತಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT