ಡಿ.ಕೆ. ಸಿದ್ರಾಮ
ಬೀದರ್: ನಗರದ ಡಿಸಿಸಿ ಬ್ಯಾಂಕಿಗೆ ಸುಳ್ಳು ಮಾಹಿತಿ ಕೊಟ್ಟು, ಸಾರ್ವಜನಿಕರ ಹಣ ವಂಚಿಸಿರುವ ಆರೋಪದಡಿ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ (ಎನ್ಎಸ್ಎಸ್ಕೆ) ಅಧ್ಯಕ್ಷ ಡಿ.ಕೆ. ಸಿದ್ರಾಮ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಜನವಾಡ ಠಾಣೆ ಪೊಲೀಸರು ಶುಕ್ರವಾರ ಬೆಳಿಗ್ಗೆ ಭಾಲ್ಕಿಗೆ ತೆರಳಿ, ಡಿ.ಕೆ. ಸಿದ್ರಾಮ ಅವರನ್ನು ಅವರ ನಿವಾಸದಲ್ಲಿ ವಶಕ್ಕೆ ಪಡೆದರು. ಆನಂತರ ಅವರನ್ನು ಬೀದರ್ ಜಿಲ್ಲಾ ನ್ಯಾಯಾಲಯದ ಎದುರು ಹಾಜರುಪಡಿಸಿದರು. ನ್ಯಾಯಾಲಯವು ಸಿದ್ರಾಮ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿತು.
ಯಾರ್ಯಾರ ವಿರುದ್ಧ ಪ್ರಕರಣ?: ಹಣ ವಂಚನೆಗೆ ಸಂಬಂಧಿಸಿದಂತೆ ಎನ್ಎಸ್ಎಸ್ಕೆ ಅಧ್ಯಕ್ಷ ಡಿ.ಕೆ. ಸಿದ್ರಾಮ, ಮಾಜಿ ವ್ಯವಸ್ಥಾಪಕ ಅಪರಂಜಿ ಬಿ.ಎಸ್., ಡಿಸಿಸಿ ಬ್ಯಾಂಕಿನ ಮಾಜಿ ಸಿಇಒ ಮಹಾಜನ್ ಮಲ್ಲಿಕಾರ್ಜುನ, ಬ್ಯಾಂಕಿನ ಮಾಜಿ ಪ್ರಧಾನ ವ್ಯವಸ್ಥಾಪಕ ಚನ್ನಬಸಯ್ಯ ಸ್ವಾಮಿ, ಬ್ಯಾಂಕಿನ ಉಪ ಪ್ರಧಾನ ವ್ಯವಸ್ಥಾಪಕ ಸದಾಶಿವ ಪಾಟೀಲ, ಇಮಾಮಪುರ ಡಿಸಿಸಿ ಬ್ಯಾಂಕಿನ ಶಾಖೆ ಮಾಜಿ ವ್ಯವಸ್ಥಾಪಕ ಸೈಯದ್ ರಾಹಿಲ್ ಅಹಮ್ಮದ್, ಎನ್ಎಸ್ಎಸ್ಕೆ ಇತರೆ ನಿರ್ದೇಶಕರ ವಿರುದ್ಧ ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.